ಶಿವಮೊಗ್ಗ ಸಿಟಿಯ 300ಕ್ಕೂ ಹೆಚ್ಚು ರೌಡಿಗಳಿಗೆ ಬಿಸಿ ಮುಟ್ಟಿಸಿದ್ರು ಹೊಸ ಎಸ್.ಪಿ, ಬಾಲ ಬಿಚ್ಚದಂತೆ ಖಡಕ್ ವಾರ್ನಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 13 ಮೇ 2019

ನಗರದಲ್ಲಿ ಕಾರ್ಯಾಚರಿಸುತ್ತಿರುವ ರೌಡಿಗಳಿಗೆ ಶಿವಮೊಗ್ಗದ ಖಾಕಿ ಪಡೆ, ಇವತ್ತು ಸರಿಯಾಗಿ ಬಿಸಿ ಮುಟ್ಟಿಸಿದೆ. ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ ನೇತೃತ್ವದಲ್ಲಿ ನಡೆದ ರೌಡಿ ಪರೇಡ್’ನಲ್ಲಿ, ಖಡಕ್ ವಾರ್ನಿಂಗ್ ನೀಡಲಾಗಿದೆ.

ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ಇವತ್ತು ರೌಡಿ ಪರೇಡ್ ನಡೆಯಿತು. ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ, ಹೆಚ್ಚುವರಿ ರಕ್ಷಣಾಧಿಕಾರಿ ಶೇಖರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಪರೇಡ್’ನಲ್ಲಿ ಪಾಲ್ಗೊಂಡಿದ್ದ ರೌಡಿಗಳಿಗೆ ವಾರ್ನಿಂಗ್ ನೀಡಿದರು.

300ಕ್ಕೂ ಹೆಚ್ಚು ರೌಡಿಗಳು ಭಾಗಿ

ಶಿವಮೊಗ್ಗ ನಗರದಲ್ಲಿ ಕಾರ್ಯಾಚರಿಸುತ್ತಿರುವ 300ಕ್ಕೂ ಹೆಚ್ಚು ರೌಡಿಗಳು, ಪರೇಡ್’ನಲ್ಲಿ ಪಾಲ್ಗೊಂಡಿದ್ದರು. ಸಿಟಿಯಲ್ಲಿರುವ ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳನ್ನು ಪ್ರತ್ಯೇಕವಾಗಿ ಪರೇಡ್’ನಲ್ಲಿ ನಿಲ್ಲಿಸಲಾಗಿತ್ತು. ಪ್ರತಿಯೊಬ್ಬರ ಬಳಿಗೂ ತೆರಳಿ ಮಾಹಿತಿ ಪಡೆದುಕೊಂಡ ಜಿಲ್ಲಾ ರಕ್ಷಣಾಧಿಕಾರಿ, ಮತ್ತೆ ಚಟುವಟಿಕೆ ಆರಂಭಿಸದಂತೆ ಎಚ್ಚರಿಸಿದರು. ಇನ್ನು, ರೌಡಿ ಪರೇಡ್’ಗೆ ಚಕ್ಕರ್ ಹಾಕಿದವರಿಗೆ, ಕೂಡಲೇ ಬಂದು ತಮ್ಮ ದಾಖಲಾತಿ ಒದಗಿಸುವಂತೆ ಸೂಚಿಸಿದ್ದಾರೆ. ಇಲ್ಲವಾದಲ್ಲಿ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದಾರೆ.

ರಾತ್ರಿ ಬೇಗ ಮನೆಗೆ ಸೇರಿಕೊಳ್ಳಿ

ರಂಜಾನ್ ಹಬ್ಬವಿದೆ, ಗಣಪತಿ ಹಬ್ಬ ಕೂಡ ಬರಲಿದೆ. ಹಾಗಾಗಿ ಸಿಟಿಯಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಯುವಂತಿಲ್ಲ. ರೌಡಿ ಲಿಸ್ಟ್’ನಲ್ಲಿರುವವರು ಸಾರ್ವಜನಿಕರಂತೆ ಯಾವಾಗ ಅಂದರೆ ಅವಾಗ ಹೊರಗೆ ಓಡಾಡುವಂತಿಲ್ಲ. ರಾತ್ರಿ 10.30ಕ್ಕೂ ಮೊದಲು ಇವರೆಲ್ಲ ಮನೆ ಸೇರಿಕೊಳ್ಳಬೇಕು. ಇನ್ನು, ಬೈಕ್’ನಲ್ಲಿ ಥ್ರಿಬಲ್ ರೈಡಿಂಗ್, ವೀಲಿಂಗ್ ಮಾಡುವುದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

60157331 842010579493697 2020340173518143488 n.jpg? nc cat=103& nc oc=AQmPDepb2zXUm6ihokYakRQlsROeJ92FkzD3kAEfwz75gCnzaXzj8UdEyIBYuMWUwzc& nc ht=scontent.fblr10 1

ನೀವಿನ್ನು ಹೊರಡಿ, ಆದರೆ ಕೋಲಿನಲ್ಲಿ ಹೊಡೆಯಂಗಿಲ್ಲ

ರೌಡಿ ಪರೇಡ್’ನಲ್ಲಿ ಕೆಲವು ವಯಸ್ಸಾದವರು ಕೂಡ ಪಾಲ್ಗೊಂಡಿದ್ದರು. ಅವರ ವಿಚಾರಣೆ ನಡೆಸಿದ ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ, ವೃದ್ಧರ ವಿರುದ್ಧ ಇರುವ ಪ್ರಕರಣಗಳ ಮಾಹಿತಿ ಪಡೆದರು. ಬಳಿಕ, ಪರೇಡ್’ನಿಂದ ತೆರಳಬಹುದು ಎಂದು ಕಳುಹಿಸಿದವರು. ಈ ವೇಳೆ, ವೃದ್ಧರೊಬ್ಬರು ಊರುಗೋಲು ಹಿಡಿದು ಬಂದಿದ್ದರು. ಇವರನ್ನು ಪರೇಡ್’ನಿಂದ ಕಳುಹಿಸುವಾಗ, ಕೋಲಿನಿಂದ ಯಾರ ಮೇಲೂ ಹಲ್ಲೆ ನಡೆಸುವಂತಿಲ್ಲ ಎಂದು ಜೋಕ್ ಮಾಡಿದರು.

ರೌಡಿ ಪರೇಡ್’ನಿಂದಾಗಿ ಶಿವಮೊಗ್ಗ ರೌಡಿಗಳಿಗೆ ಬಿಸಿ ಮುಟ್ಟಿದೆ. ಮುಂದಿನ ಕ್ರಮಕ್ಕೆ ಅನುಕೂಲವಾಗಲಿ ಎಂಬ ಕಾರಣಕ್ಕೆ ರೌಡಿಗಳ ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳು, ಮೊಬೈಲ್ ನಂಬರ್’ಗಳನ್ನು ಸಂಗ್ರಹಿಸಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 13, 2019

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment