ಶಿವಮೊಗ್ಗ ಲೈವ್.ಕಾಂ | SAGARA NEWS | 24 OCT 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದಾನೆ. ಹತ್ತು ಮಹಿಳೆಯರು ಗಾಯಗೊಂಡಿದ್ದಾರೆ.
ಸಾಗರ ತಾಲೂಕು ಸುಳಗೋಡಿನಲ್ಲಿ ಘಟನೆ ಸಂಭವಿಸಿದೆ. ಗಾರ್ಮೆಂಟ್ಸ್ ಒಂದಕ್ಕೆ ಮಹಿಳೆಯರನ್ನು ಕರೆದೊಯ್ಯುತ್ತಿದ್ದಾಗ ಅಪಘಾತವಾಗಿದೆ.
ಹೇಗಾಯ್ತು ಅಪಘಾತ?
ಕೆಳದಿಪುರ ಗ್ರಾಮದಿಂದ ಮಹಿಳೆಯರನ್ನು ಗಾರ್ಮೆಂಟ್ಸ್ಗೆ ಬಿಡಲು ಕಾರು ತೆರಳುತ್ತಿತ್ತು. ಸುಳಗೋಡು ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆ ಬದಿ ಬಸ್ಸಿಗಾಗಿ ಕಾದು ನಿಂತಿದ್ದ ಮಹಿಳೆಯರಿಗೆ ಕಾರು ಡಿಕ್ಕಿಯಾಗಿದೆ.
ಕಾರು ಚಾಲಕ ಸಾವು
ಮಹಿಳೆಯರಿಗೆ ಡಿಕ್ಕಿ ಹೊಡೆದ ಕಾರು ಬಳಿಕ ರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಚಾಲಕ ಸುರೇಶ್ (48) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಸ್ಪತ್ರೆಗೆ ಶಾಸಕ ಹಾಲಪ್ಪ
ಗಾಯಗೊಂಡ ಮಹಿಳೆಯರನ್ನು ಸಾಗರದ ಕಾರಿನಲ್ಲಿದ್ದ ಐವರು ಮಹಿಳೆಯರು ಮತ್ತು ರಸ್ತೆಯಲ್ಲಿ ನಿಂತಿದ್ದ ಐವರು ಮಹಿಳೆಯರು ಗಾಯಗೊಂಡಿದ್ದಾರೆ. ಅವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಶಾಸಕ ಹರತಾಳು ಹಾಲಪ್ಪ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






