ಶಿವಮೊಗ್ಗ ಲೈವ್.ಕಾಂ | SAGARA NEWS | 24 OCT 2021
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದಾನೆ. ಹತ್ತು ಮಹಿಳೆಯರು ಗಾಯಗೊಂಡಿದ್ದಾರೆ.
ಸಾಗರ ತಾಲೂಕು ಸುಳಗೋಡಿನಲ್ಲಿ ಘಟನೆ ಸಂಭವಿಸಿದೆ. ಗಾರ್ಮೆಂಟ್ಸ್ ಒಂದಕ್ಕೆ ಮಹಿಳೆಯರನ್ನು ಕರೆದೊಯ್ಯುತ್ತಿದ್ದಾಗ ಅಪಘಾತವಾಗಿದೆ.
ಹೇಗಾಯ್ತು ಅಪಘಾತ?
ಕೆಳದಿಪುರ ಗ್ರಾಮದಿಂದ ಮಹಿಳೆಯರನ್ನು ಗಾರ್ಮೆಂಟ್ಸ್ಗೆ ಬಿಡಲು ಕಾರು ತೆರಳುತ್ತಿತ್ತು. ಸುಳಗೋಡು ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆ ಬದಿ ಬಸ್ಸಿಗಾಗಿ ಕಾದು ನಿಂತಿದ್ದ ಮಹಿಳೆಯರಿಗೆ ಕಾರು ಡಿಕ್ಕಿಯಾಗಿದೆ.
ಕಾರು ಚಾಲಕ ಸಾವು
ಮಹಿಳೆಯರಿಗೆ ಡಿಕ್ಕಿ ಹೊಡೆದ ಕಾರು ಬಳಿಕ ರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಚಾಲಕ ಸುರೇಶ್ (48) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆಸ್ಪತ್ರೆಗೆ ಶಾಸಕ ಹಾಲಪ್ಪ
ಗಾಯಗೊಂಡ ಮಹಿಳೆಯರನ್ನು ಸಾಗರದ ಕಾರಿನಲ್ಲಿದ್ದ ಐವರು ಮಹಿಳೆಯರು ಮತ್ತು ರಸ್ತೆಯಲ್ಲಿ ನಿಂತಿದ್ದ ಐವರು ಮಹಿಳೆಯರು ಗಾಯಗೊಂಡಿದ್ದಾರೆ. ಅವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಶಾಸಕ ಹರತಾಳು ಹಾಲಪ್ಪ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200