SHIVAMOGGA LIVE NEWS | 6 DECEMBER 2023
SHIRALAKOPPA : ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಅವರಿಂದ ಶ್ರೀಗಂಧ ಮತ್ತು ಗರಗಸ ವಶಕ್ಕೆ ಪಡೆಯಲಾಗಿದೆ.
![]() |
ಶಿರಾಳಕೊಪ್ಪದ ಸಮೀಪದ ಬಸವನಂದಿಹಳ್ಳಿ ವ್ಯಾಪ್ತಿಯ ಹುಲಿಗಿನ ಕೊಪ್ಪ ಅರಣ್ಯ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗದ ಮೈಲಾರಿ ಮತ್ತು ಮಂಜುನಾಥ್ ಬಂಧಿತರು. ಅವರಿಂದ 26 ಕೆ.ಜಿ. ಶ್ರೀಗಂಧ, 2 ಕೈ ಗರಗಸ ಹಾಗೂ ಒಂದು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಓರ್ವ ಆರೋಪಿ ಪರಾರಿಯಾಗಿದ್ದಾನೆ.
ಇದನ್ನೂ ಓದಿ – BREAKING NEWS – ಶಿಕಾರಿಪುರದಲ್ಲಿ ಪೊಲೀಸ್ ಠಾಣೆ ಮುಂದೆ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಪ್ರತಿಭಟನೆ
ಡಿಸಿಎಫ್ ಸಂತೋಷ್ ಕುಮಾರ್, ಎಸಿಎಫ್ ಸುರೇಶ್ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ಶಗುಪ್ತ ಎ ಶೇಕ್,ಉಪ ವಲಯ ಅರಣ್ಯ ಅಧಿಕಾರಿ ಅಕ್ಷಯ್ ಕುಮಾರ್, ಪ್ರಸನ್ನ , ಮಲ್ಲಪ್ಪ, ಗಸ್ತು ಅರಣ್ಯ ಪಾಲಕ ಶಿವಶರಣ, ಲತೀಫ್ ಹಾಗೂ ಸಿಬ್ಬಂದಿ ಅರುಣ್ ಉಜ್ಜಪ್ಪ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200