ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯಲ್ಲಿ ಇಂದು ಮಧ್ಯಾಹ್ನ ಶಾಲಾ ಬಸ್ (school bus) ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಗೋಪಾಲಗೌಡ ಬಡಾವಣೆಯ ನಿವಾಸಿ ಮಂಜುನಾಥ್ ಎಂಬುವವರ ಪುತ್ರ ಆರ್ಯನ್ (1 ವರ್ಷ 6 ತಿಂಗಳು) ಮೃತ ಮಗು. ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ. ಮಂಜುನಾಥ್ ಅವರ ಎರಡನೇ ಮಗ ಆರುಷ್ ಖಾಸಗಿ ಶಾಲೆಯೊಂದರಲ್ಲಿ ಎಲ್‌ಕೆಜಿ ಓದುತ್ತಿದ್ದು, ಮಧ್ಯಾಹ್ನ ಶಾಲಾ ಬಸ್‌ನಲ್ಲಿ ಮನೆಗೆ ಮರಳಿದ್ದನು.

ಆರುಷ್‌ನನ್ನು ಕರೆತರಲು ಮನೆಯ ಕೆಲಸದ ಮಹಿಳೆ ಆಶಾ ಅವರು ಬಸ್ಸಿನ ಬಳಿ ಹೋಗಿದ್ದರು. ಈ ವೇಳೆ ಅವರ ಹಿಂದೆಯೇ ಮಗು ಆರ್ಯನ್ ಕೂಡ ರಸ್ತೆಗೆ ಬಂದಿದ್ದಾನೆ. ಆಶಾ ಅವರು ಆರುಷ್‌ನನ್ನು ಬಸ್ಸಿನಿಂದ ಇಳಿಸಿಕೊಳ್ಳುತ್ತಿದ್ದ ಸಂದರ್ಭ, ಮಗು ಆರ್ಯನ್ ಬಸ್ಸಿನ ಮುಂಭಾಗದಿಂದ ರಸ್ತೆ ದಾಟುತ್ತಿದ್ದನು. ಇದನ್ನು ಗಮನಿಸದ ಬಸ್ ಚಾಲಕ ಉಮೇಶ್, ಅಜಾಗರೂಕತೆಯಿಂದ ಬಸ್ಸನ್ನು ಚಲಾಯಿಸಿದ ಪರಿಣಾಮ ಮಗುವಿಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ : ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಅಪಘಾತದಿಂದ ಮಗುವಿನ ತಲೆ ಹಾಗೂ ಮುಖಕ್ಕೆ ತೀವ್ರ ಗಾಯವಾಗಿತ್ತು. ಕೂಡಲೇ ಮಗುವನ್ನು ಅದೇ ಶಾಲಾ ಬಸ್‌ನಲ್ಲಿ ಸರ್ಜಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ಘೋಷಿಸಿದ್ದಾರೆ. ಈ ಸಂಬಂಧ ಮಗುವಿನ ತಂದೆ ಮಂಜುನಾಥ್ ಅವರು ನೀಡಿದ ದೂರಿನ ಮೇರೆಗೆ ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2026

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

Leave a Comment