ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 APRIL 2024
HOLEHONNURU : ಭದ್ರಾ ನಾಲೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಸಮೀಪದ ಗುಡುಮಗಟ್ಟೆಯಲ್ಲಿ ಘಟನೆ ಸಂಭವಿಸಿದೆ. ಆನವೇರಿಯ ಉಮೇಶ್ ಶೆಟ್ಟಿ ಅವರ ಮಗ ರಜತ್ (10) ಮತ್ತು ಕುಂದಾಪುರದ ತೆಕ್ಕಟ್ಟೆ ನಿವಾಸಿ ನವೀನ್ ಶೆಟ್ಟಿ ಅವರ ಮಗ ರೋಹನ್ (15) ಮೃತ ದುರ್ದೈವಿಗಳು.
ಆಟವಾಡಲು ಹೋಗಿ ನೀರುಪಾಲದ ಮಕ್ಕಳು
ರಜತ್ ಮತ್ತು ರೋಹನ್ ನೀರಿನಲ್ಲಿ ಆಟವಾಡಲು ಭದ್ರಾ ನಾಲೆ ಬಳಿ ಹೋಗಿದ್ದರು. ಈ ವೇಳೆ ಆಯಾತಪ್ಪಿ ಇಬ್ಬರು ನೀರಿನಲ್ಲಿ ಮುಳುಗಿದ್ದಾರೆ ಎಂದು ಶಂಕಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಮಕ್ಕಳಿಗೆ ಶೋಧ ಕಾರ್ಯ ನಡೆಸಿದರು. ಗುಡುಮಗಟ್ಟೆ ಸೇತುವೆ ಬಳಿ ಇಬ್ಬರ ಮೃತದೇಹ ಪತ್ತೆಯಾಗಿದೆ.
ರಜೆ ಕಳೆಯಲು ಕುಂದಾಪುರದಿಂದ ಬಂದಿದ್ದ
ಮೂಲತಃ ಕುಂದಾಪುರದ ಉಮೇಶ್ ಶೆಟ್ಟಿ ಆನವೇರಿಯಲಿ ಹೊಟೇಲ್ ನಡೆಸುತ್ತಿದ್ದಾರೆ. ಇವರ ಮಗ ರಜತ್ ನಾಲ್ಕನೆ ತರಗತಿ ಓದುತ್ತಿದ್ದ. ಸಂಬಂಧಿ ನವೀನ್ ಶೆಟ್ಟಿ ಅವರ ಮಗ ರೋಹನ್ ಕುಂದಾಪುರದಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ. ರಜೆ ಹಿನ್ನೆಲೆ ರೋಹನ್ ಆನವೇರಿಗೆ ಬಂದಿದ್ದ. ನೀರಿನಲ್ಲಿ ಆಟವಾಡಲು ಇಬ್ಬರು ಭದ್ರಾ ನಾಲೆ ಬಳಿ ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಕುಂದಾಪುರದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಘಟನೆ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಭದ್ರಾವತಿಯಲ್ಲಿ ಪೊಲೀಸ್ ರೇಡ್, ಮಹಿಳೆ ಅರೆಸ್ಟ್, ಲಕ್ಷ ಲಕ್ಷದ ಮಾದಕ ವಸ್ತು ಸೀಜ್
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





