ಶಿಕಾರಿಪುರ : ಸಿಟಿಯ ಚನ್ನಕೇಶವ ನಗರದಲ್ಲಿ ಸರಣಿ ಮನೆಗಳ್ಳತನವಾಗಿದೆ (theft). ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ, ನಗದು ಕಳವುವಾಗಿದೆ ಎಂದು ಆರೋಸಪಿಸಲಾಗಿದೆ. ಸೋಮವಾರ ರಾತ್ರಿ ಘಟನೆ ಸಂಭವಿಸಿದೆ.
ಚನ್ನಕೇಶವ ನಗರದ 15ನೇ ಅಡ್ಡರಸ್ತೆ ನಿವಾಸಿ ನಂದ ಬಣಕಾರ್ ಅವರು ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದರು. ಕಳ್ಳರು ಅವರ ಮನೆ ಬಾಗಿಲು ಮುರಿದು ಮಾಂಗಲ್ಯ ಸರ ಸೇರಿದಂತೆ ಅಂದಾಜು 14 ಲಕ್ಷ ರೂ. ಮೌಲ್ಯದ ಒಡವೆ ಹಾಗೂ 50 ಸಾವಿರ ರೂ. ನಗದು ಕಳವು ಮಾಡಿದ್ದಾರೆ.
ಇದೇ ಕೇರಿಯಲ್ಲಿರುವ ಮೆಸ್ಕಾಂ ಲೈನ್ಮನ್ ಹಾಲೇಶಪ್ಪ ಅವರ ಮನೆ ಬಾಗಿಲು ಮುರಿದು ಕಳ್ಳತನ (theft) ಮಾಡಲಾಗಿದೆ. ಈ ವೇಳೆ ಪಕ್ಕದ ಮನೆಯವರು ಹೊರಗೆ ಬಂದಾಗ ಕಳ್ಳರು ಕಾಣಿಸಿಕೊಂಡಿದ್ದಾರೆ. ಅವರನ್ನು ಹಿಡಿಯುವ ಪ್ರಯತ್ನ ಮಾಡಿದಾಗ, ಬೆಳ್ಳಿ ವಸ್ತುಗಳಿದ್ದ ಚೀಲ ಸಿಕ್ಕಿದೆ.
ಚನ್ನಕೇಶವ ನಗರದ ತಿಪ್ಪೇಶಪ್ಪ ಹಾಗೂ ಇದೇ ಕೇರಿಯಲ್ಲಿರುವ ವೆಂಕಟೇಶ್ ಅವರ ಮನೆಯಲ್ಲೂ ಕಳ್ಳತನವಾಗಿದೆ. ಶಿಕಾರಿಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ