ನಡುರಾತ್ರಿ ಮೈಸೂರು ಬಸ್‌ ಹತ್ತಿ ಸೀಟಿನಲ್ಲಿ ಕುಳಿತು ಶಾಲು ಹೊದ್ದುಕೊಂಡ ನಂತರ ನರ್ಸ್‌ಗೆ ಕಾದಿತ್ತು ಶಾಕ್

 ಶಿವಮೊಗ್ಗ  LIVE 

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕಳ್ಳರ ಹಾವಳಿ ಮುಂದುವರೆದಿದೆ. ಬಸ್‌ ಹತ್ತುವಾಗ ನರ್ಸ್‌ (Nurse) ಒಬ್ಬರ ಮಾಂಗಲ್ಯ ಸರ ಕಳವು ಮಾಡಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನಡುರಾತ್ರಿ ಗೀತಾ ಎಂಬುವವರು ಶಿವಮೊಗ್ಗದಿಂದ ಮೈಸೂರು ಬಸ್‌ ಹತ್ತಿದ್ದಾರೆ. ಸೀಟಿನಲ್ಲಿ ಕುಳಿತು ಚಳಿ ಇದ್ದರಿಂದ ಶಾಲ್‌ ಹೊದ್ದುಕೊಂಡಿದ್ದಾರೆ. ಆಗ ಕೊರಳಲಿದ್ದ ಮಾಂಗಲ್ಯ ಸರ ನಾಪತ್ತೆ ಆಗಿರುವುದು ಗೊತ್ತಾಗಿದೆ. ಬಸ್‌ ಹತ್ತುವಾಗ ಜನ ಸಂದಣಿ ಇತ್ತು. ಆ ಸಂದರ್ಭ ಮಾಂಗಲ್ಯ ಸರ ಕಳ್ಳತನ ಮಾಡಿರುವ ಶಂಕೆ ಇದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಕಳುವಾಗಿರುವುದು ₹2.24 ಲಕ್ಷದ 40 ಗ್ರಾಂ ತೂಕದ ಮಾಂಗಲ್ಯ ಸರ ಎಂದು ತಿಳಿಸಲಾಗಿದೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಸಾಲ ಬಾಧೆ, ಸಾಗರದಲ್ಲಿ ವಿಷ ಸೇವಿಸಿದ್ದ ರೈತ, ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೊನೆಯುಸಿರು

Nurse

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment