ಭದ್ರಾವತಿ – ಶಿವಮೊಗ್ಗ ರಸ್ತೆಯಲ್ಲಿ ರಾತ್ರಿ ಕಾರು ಅಡ್ಡಗಟ್ಟಿ ದಾಳಿ, ಆಗಿದ್ದೇನು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಭದ್ರಾವತಿಯಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಬರುತ್ತಿದ್ದ ಧನುಷ್ ಎಂ. ಜಾಧವ್ ಎಂಬುವರ ಕಾರನ್ನು ಮತ್ತೊಂದು ಕಾರು ಓವರ್‌ಟೇಕ್ (Overtake) ಮಾಡಿ ಅಡ್ಡಗಟ್ಟಿ, ಅದರಲ್ಲಿದ್ದ ಇಬ್ಬರು ಅಪರಿಚಿತರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ನವೆಂಬರ್ 25ರ ರಾತ್ರಿ ಘಟನೆ ನಡೆದಿದೆ. ಭದ್ರಾವತಿಯಲ್ಲಿ (Bhadravathi) ಸ್ನೇಹಿತನ ಮದುವೆ ಕಾರ್ಯಕ್ರಮ ಮುಗಿಸಿ ಧನುಷ್ ಜಾಧವ್ ಶಿವಮೊಗ್ಗಕ್ಕೆ ಬರುತ್ತಿದ್ದರು. ಬಿದಿರೆ ಜಯಲಕ್ಷ್ಮಿ ಫೂಯೆಲ್ಸ್ (Jayalaxmi Fuels) ಬಳಿ ಹೆದ್ದಾರಿಯಲ್ಲಿ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಕಾರು ಓವರ್‌ಟೇಕ್ ಮಾಡಿ ಅಡ್ಡಗಟ್ಟಿದೆ ಎಂದು ಆರೋಪಿಸಲಾಗಿದೆ.

Shimoga-Bhadravathi-Road-Old-Photo.webp

ಇದನ್ನೂ ಓದಿ » ಭದ್ರಾ ಜಲಾಶಯದ ಬಳಿ ಪ್ರವಾಸಿಗರ ವಾಹನ ಬೆನ್ನಟ್ಟಿದ ಕಾಡಾನೆ, ಆಗಿದ್ದೇನು?

ಕಾರಿನಲ್ಲಿದ್ದ ಇಬ್ಬರು ಅಪರಿಚಿತರು ಧನುಷ್‌ಗೆ ಅವಾಚ್ಯವಾಗಿ ನಿಂದಿಸಿ, ಕೊಲೆ ಬೆದರಿಕೆ ಒಡ್ಡಿದ್ದಾರೆ. ಅಲ್ಲದೆ ಮುಖಕ್ಕೆ ಗುದ್ದಿ, ತುಟಿ, ಮೈ ಕೈ ಮತ್ತು ಹೊಟ್ಟೆಗೆ ಹೊಡೆದಿದ್ದಾರೆ. ಧನುಷ್‌ ಅವರ ಮೊಬೈಲ್‌ಗು ಹಾನಿಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment