ವಿಮಾನದಲ್ಲಿ ಬಂದು ಶಿವಮೊಗ್ಗದಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿ ಸೇರಿ ಆರು ಮಂದಿ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಅಕ್ಟೋಬರ್ 2020

ವಿಮಾನದಲ್ಲಿ ಬಂದು ಶಿವಮೊಗ್ಗದಲ್ಲಿ ಸರಗಳ್ಳತನ ಮಾಡಿದ್ದ ವ್ಯಕ್ತಿ ಸೇರಿ, ಆರು ಮಂದಿಯನ್ನು ಶಿವಮೊಗ್ಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರೆಲ್ಲರು ಉತ್ತರ ಪ್ರದೇಶ ಮೂಲದವರು.

ಯಾರಿದು ಖತರ್ನಾಕ್ ಕಳ್ಳರು?

ಶಿವಮೊಗ್ಗದಲ್ಲಿ ಕಳೆದ ತಿಂಗಳು ಸಾಲು ಸಾಲು ಸರಗಳ್ಳತನ ಪ್ರಕರಣಗಳು ವರದಿಯಾದವು. ಅದೆ ರೀತಿ ಕಳೆದ ವರ್ಷ ದೀಪಾವಳಿ ಸಂದರ್ಭದಲ್ಲೂ ಸರಗಳ್ಳತನಗಳಾಗಿದ್ದವು. ಜಯನಗರ ಮತ್ತು ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣಗಳು ಸಂಭವಿಸಿದ್ದವು. ಇದರ ತನಿಖೆ ನಡೆಸಿದ ಪೊಲೀಸರು ಆರು ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಇವರೆಲ್ಲ ಉತ್ತರ ಪ್ರದೇಶದ ಮೀರತ್ ಜಿಲ್ಲೆಯವರು.

VIDEO REPORT

ಬಂಧಿತರನ್ನು ಫೈಸಲ್ (25), ಸಲ್ಮಾನ್ (24), ಆಶೀಸ್ ಕುಮಾರ್ (36), ಮೆಹತಾಬ್ (35), ಸಲ್ಮಾನ್ (22). ಮಹಮ್ಮದ್ ಚಾಂದ್ (23) ಎಂದು ಗುರುತಿಸಲಾಗಿದೆ.

122428090 983860098760567 2816976454692017560 n.jpg? nc cat=108& nc sid=8024bb& nc ohc=SiPKieh1mQMAX H6SoY& nc ht=scontent.fblr1 4

ವಿದ್ಯಾನಗರದಲ್ಲಿ ಸಿಕ್ಕಿಬಿದ್ದಿದ್ದರು

ಸುದ್ದಿಗೋಷ್ಠಿಯಲ್ಲಿ ಪ್ರಕರಣ ಸಂಬಂಧ ಮಾಹಿತಿ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು, ಸರಗಳ್ಳರ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿತ್ತು. ಈ ನಡುವೆ ದರೋಡೆಗೆ ಹೊಂಚು ಹಾಕಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿ, ವಿದ್ಯಾನಗರ ಸಮೀಪ ಆರೋಪಿಗಳನ್ನು ಬಂಧಿಸಲಾಯಿತು. ವಿಚಾರಣೆ ನಡೆಸಿದಾಗ ಸರಗಳ್ಳತನ ಪ್ರಕರಣಗಳು ಬಯಲಿಗೆ ಬಂದಿವೆ ಎಂದು ತಿಳಿಸಿದರು.

118888608 1213241345703950 5567030714421366457 n.jpg? nc cat=105&ccb=2& nc sid=8024bb& nc ohc=fFSyAGf4O3wAX9Wn o3& nc ht=scontent.fblr11 1

ವಿಮಾನದಲ್ಲಿ ಬಂದಿದ್ದ ಆರೋಪಿ

ಉತ್ತರ ಪ್ರದೇಶದಿಂದ ಶಿವಮೊಗ್ಗಕ್ಕೆ ಬಂದಿದ್ದ ಆರೋಪಿಗಳು ಇಲ್ಲಿನ ಲಾಡ್ಜ್‍ ಒಂದರಲ್ಲಿ ಉಳಿದುಕೊಂಡಿದ್ದರು. ಪ್ರಕರಣದ ಆರೋಪಿಗಳ ಪೈಕಿ ಒಬ್ಬಾತ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದು, ಅಲ್ಲಿಂದ ಬೈಕ್‍ನಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ್ದ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದರು.

ಶಿವಮೊಗ್ಗದಲ್ಲಿ ಒಬ್ಬನ ಸಹಕಾರ

ಆರೋಪಿಗಳಿಗೆ ಶಿವಮೊಗ್ಗದಲ್ಲಿ ಒಬ್ಬಾತ ಸಹಕಾರ ನೀಡಿದ್ದಾನೆ. ಮೂಲತಃ ಉತ್ತರ ಪ್ರದೇಶದ ಮೀರತ್‍ನ ಮಹಮ್ಮದ್ ಚಾಂದ್‍ ಎಂಬಾತ, ಶಿವಮೊಗ್ಗದ ಜೋಸೆಫ್‍ ನಗರದಲ್ಲಿ ನೆಲೆಸಿದ್ದ. ಇಲ್ಲಿ ಬೆಡ್‍ಶೀಟ್ ವ್ಯಾಪಾರ ಮಾಡುತ್ತಿದ್ದ ಎಂದು ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು ತಿಳಿಸಿದರು. ಈತ ಆರೋಪಿಗಳಿಗೆ ನೆರವು ನೀಡಿದ್ದ ಎಂದು ವಿಚಾರವಣೆ ವೇಳೆ ತಿಳಿದು ಬಂದಿದ್ದು, ಮಹಮ್ಮದ್ ಚಾಂದ್‍ನನ್ನು ಬಂಧಿಸಲಾಗಿದೆ.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

2 ಪಿಸ್ತೂಲು, 12 ಜೀವಂತ ಗುಂಡು

ಬಂಧಿತರ ಬಳಿ ಎರಡು ಪಿಸ್ತೂಲುಗಳು, 12 ಜೀವಂತ ಗುಂಡು, ಒಂದು ಬೈಕ್‍ ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಕಳ್ಳತನ ಮಾಡಿದ್ದ 9.31 ಲಕ್ಷ ಮೌಲ್ಯದ 213.20 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.

ಪೊಲೀಸರಿಗೆ ಬಹುಮಾನ

ಪ್ರಕರಣದ ತನಿಖೆ, ಆರೋಪಿಗಳ ಬಂಧನ ಮತ್ತು ವಿಚಾರಣೆಯಲ್ಲಿ ತೊಡಗಿಸಿಕೊಂಡಿದ್ದ ಪೊಲೀಸರಿಗೆ ನಗದು ಬಹುಮಾನ ಘೋಷಿಸಲಾಗಿದೆ.

122569515 985496425263601 186764312706410466 o.jpg? nc cat=109&ccb=2& nc sid=110474& nc ohc=ULbZk K2k6gAX Vx3dX& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 28, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment