SHIVAMOGGA LIVE NEWS |18 DECEMBER 2022
ಶಿವಮೊಗ್ಗ : ಕೋರ್ಪಲಯ್ಯ ಛತ್ರ ಮಂಟಪದ ಬಳಿ ಕಾಲು ಜಾರಿ ತುಂಗಾ ಹೊಳೆಗೆ (slipped to river) ಬಿದ್ದಿದ್ದಾರೆ ಎನ್ನಲಾದ ವ್ಯಕ್ತಿಯೊಬ್ಬ ಈತನಕ ಪತ್ತೆಯಾಗಿಲ್ಲ.
ಖಾಸಗಿ ಸಂಸ್ಥೆ ಉದ್ಯೋಗಿ ಯಾಲಕಪ್ಪನ ಕೇರಿ ನಿವಾಸಿ ಸಿದ್ದೋಜಿ ರಾವ್ (52) ನಾಪತ್ತೆಯಾದವರು. ಡಿ.15ರಂದು ಬೆಳಗ್ಗೆ 7 ಗಂಟಗೆ ಸಿದ್ದೋಜಿ ರಾವ್ ಕೋರ್ಪಲಯ್ಯ ಛತ್ರ ಮಂಟಪದ ಬಳಿ ತುಂಗಾ ಹೊಳೆಯಲ್ಲಿ ಸ್ನಾನಕ್ಕೆಂದು ಬಂದಿದ್ದರು. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಾರೆ (slipped to river) ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸ್ನೇಹಿತ ಸುರೇಶ್ ನಾಡಿಗ್ ಅವರು ಸಿದ್ದೋಜಿ ರಾವ್ ಅವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ ಎಂದು ಅವರ ಕುಟುಂಬದವರಿಗೆ ತಿಳಿಸಿದ್ದಾರೆ. ಸಿದ್ದೋಜಿ ರಾವ್ ಅವರ ಸಹೋದರ ನಾಗರಾಜ್ ಅವರು ಕೋರ್ಪಲಯ್ಯ ಛತ್ರ ಮಂಟಪದ ಬಳಿ ಬಂದು ಹುಡುಕಿದ್ದಾರೆ. ಸ್ಥಳದಲ್ಲಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಮಾಸಲು ಕ್ರೀಂ ಬಣ್ಣದ ಟೀ ಶರ್ಟ್, ಬಿಳಿ ಟವೆಲ್ ಪತ್ತೆಯಾಗಿದೆ.
ಎಲ್ಲೆಡೆ ಹುಡುಕಾಡಿದ ಬಳಿಕ ಸಿದ್ದೋಜಿ ರಾವ್ ಅವರ ಸಹೋದರ ನಾಗರಾಜ್, ಕೋಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200