SHIVAMOGGA LIVE NEWS | 10 OCTOBER 2023
BHADRAVATHI : ಯುವಕನಿಗೆ ಇರಿತ ಪ್ರಕರಣ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ (Media) ಸ್ಪಷ್ಟನೆ ನೀಡಿದ್ದಾರೆ. ಮೊಬೈಲ್ ಫೋನ್ ಅಡವಿಡುವ ವಿಚಾರ ಮತ್ತು ವೈಯಕ್ತಿಕ ಕಾರಣಕ್ಕೆ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.
ಆಗಿದ್ದೇನು?
ಭದ್ರಾವತಿ ಹನುಮಂತನಗರದಲ್ಲಿ ನಂದಾ ಎಂಬಾತನಿಗೆ ಸೋಮವಾರ ಇರಿಯಲಾಗಿತ್ತು. ಕೂಡಲೆ ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವಿಷಯ ತಿಳಿಯುತ್ತಲೆ ವಿವಿಧ ಸಂಘಟನೆ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದರು.
ವಾಟ್ಸಪ್ನಲ್ಲಿ ಎಸ್ಪಿ ಸ್ಪಷ್ಟನೆ
ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವಾಟ್ಸಪ್ ಮೆಸೇಜ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ‘ಭದ್ರಾವತಿ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನಿಗೆ ಚೂಪಾದ ವಸ್ತುವಿನಿಂದ ಇರಿಯಲಾಗಿದೆ. ಘಟನೆ ಸಂಬಂಧ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಮೊಬೈಲ್ ಫೋನ್ ಅಡವಿಡುವ ವಿಚಾರ ಮತ್ತು ವೈಯಕ್ತಿಕ ವಿಚಾರಕ್ಕೆ ಘಟನೆ ಸಂಭವಿಸಿದೆ. ಇದರಲ್ಲಿ ಯಾವುದೆ ಕೋಮು ವಿಚಾರಗಳಿಲ್ಲʼ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ – ಸದ್ಯದಲ್ಲೆ ವಾಟ್ಸಪ್ನಲ್ಲಿ ‘ಸೀಕ್ರೆಟ್ ಕೋಡ್’ ಚಾಟಿಂಗ್, ಏನಿದು? ಹೇಗೆ ಕೆಲಸ ಮಾಡುತ್ತೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200