ಶಿವಮೊಗ್ಗದ ಲೈವ್.ಕಾಂ | SHIMOGA NEWS | 29 ಡಿಸೆಂಬರ್ 2021
ಮಾದಕ ವಸ್ತುಗಳ ಮಾರಾಟ ತಡೆಗಟ್ಟಲು ಸ್ಥಾಪಿಸಲಾಗಿರುವ ವಿಶೇಷ ತಂಡ ಶರಾವತಿ ನಗರದಲ್ಲಿ ದಾಳಿ ನಡೆಸಿ ಯುವಕನೊಬ್ಬನನ್ನು ಬಂಧಿಸಿದೆ. ಪಿಎಸ್ಐ ಮಂಜುನಾಥ್ ನೇತೃತ್ವದ ತಂಡ ದಾಳಿ ನಡೆಸಿ ಯುವಕನ ವಿರುದ್ಧ ಪ್ರಕರಣ ದಾಖಲು ಮಾಡಿದೆ.
ಆಕಾಶ್ (23) ಬಂಧಿತ ಯುವಕ. ಬೈಕ್ ರಿಪೇರಿ ಕೆಲಸ ಮಾಡುವ ಈತನ ಮೇಲೆ ದಾಳಿ ನಡೆಸಿ ಮೆಡಿಕಲ್ ಪರೀಕ್ಷೆಗೆ ಒಳಪಡಿಸಿ, ಪ್ರಕರಣ ದಾಖಲು ಮಾಡಲಾಗಿದೆ.
ಏನಿದು ಪ್ರಕರಣ? ದಾಳಿಗೇನು ಕಾರಣ?
ಮಾದಕ ವಸ್ತುಗಳ ಮಾರಾಟ ತಡೆಗೆ ರಚಿಸಲಾಗಿರುವ ವಿಶೇಷ ತಂಡದ ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ಶರಾವತಿ ನಗರ ಓವರ್ ಹೆಡ್ ಟ್ಯಾಂಕ್ ಬಳಿಕ ಆಕಾಶ್ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಆಕಾಶ್’ನನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೆಡಿಕಲ್ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಗಾಂಜಾ ಸೇವನೆ ಮಾಡಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ದೊಡ್ಡಪೇಟೆ ಠಾಣೆಯಲ್ಲಿ ಆಕಾಶ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ವಿಶೇಷ ತಂಡದ ಪಿಎಸ್ಐ ಮಂಜುನಾಥ್, ಸಿಬ್ಬಂದಿ ರಮೇಶ್, ಉಮೇಶ್ ನಾಯ್ಕ, ಲಂಕೇಶ, ಬಸವಂತಪ್ಪ, ಪ್ರಕಾಶ್, ಮಂಜುನಾಥನಾಯ್ಕ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200