ಶಿವಮೊಗ್ಗ LIVE
ಹೈಲೈಟ್ಸ್
ಶಿವಮೊಗ್ಗ: ಮಲವಗೊಪ್ಪದ ಪೆಟ್ರೋಲ್ ಬಂಕ್ ಎದುರು ನಿನ್ನೆ ರಾತ್ರಿ ಇಬ್ಬರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬರಿಗೆ ಚಾಕು (Stabbed) ಇರಿಯಲಾಗಿದೆ. ಮಿಳ್ಳಘಟ್ಟ ನಿವಾಸಿ ವಿನೋದ್ (35) ಚಾಕು ಇರಿತಕ್ಕೊಳಗಾದವರು. ಆರೋಪಿ ವಿಕ್ರಂ (42) ಎಂಬಾತ ವಿನೋದ್ ಅವರ ಮೇಲೆ ಚಾಕುವಿನಿಂದ ಮನಸೋಇಚ್ಛೆ ದಾಳಿ ನಡೆಸಿದ್ದಾನೆ.

ದಾಳಿಯ ರಭಸಕ್ಕೆ ವಿನೋದ್ ಅವರ ಮುಖ, ಕೈ ಹಾಗೂ ಮೈಮೇಲೆ ತೀವ್ರ ಗಾಯಗಳಾಗಿವೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿ ವಿಕ್ರಂ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ವೈಯಕ್ತಿಕ ಕಾರಣಕ್ಕೆ ಜಗಳವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಪೋಟ, ಎಲ್ಲಿ? ಏನೇನು ಹಾನಿಯಾಗಿದೆ?
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






