ಶಿವಮೊಗ್ಗದ ಲೈವ್.ಕಾಂ | SHIMOGA NEWS | 2 ಫೆಬ್ರವರಿ 2022
ಬಾರ್ ಒಂದರಲ್ಲಿ ಮದ್ಯ ಸೇವಿಸಿದ ಯುವಕರು ಇತರೆ ಗ್ರಾಹಕರ ಜೊತೆಗೆ ಜಗಳವಾಡಿದ್ದಾರೆ. ಬಾರ್ ಮುಂದೆ ನಿಂತು ಕಲ್ಲು ತೂರಾಟ ಮಾಡಿದ್ದಾರೆ. ಇದನ್ನು ಪ್ರಶ್ನಿಸಲು ಹೋದ ಬಾರ್ ಸಿಬ್ಬಂದಿಯತ್ತಲೂ ಕಲ್ಲು ತೂರಿ, ಹೊಡೆದಿದ್ದಾರೆ.
ಶಿವಮೊಗ್ಗ ಲೈವ್.ಕಾಂ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸೋಮಿನಕೊಪ್ಪದ ಬ್ಲೂ ಸ್ಟಾರ್ ಬಾರ್ ಅಂಡ್ ರೆಸ್ಟೋರೆಂಟ್’ನಲ್ಲಿ ಘಟನೆ ಸಂಭವಿಸಿದೆ. ಈ ಸಂಬಂಧ ಬಾರ್ ಮಾಲೀಕರು ಯುವಕರ ವಿರುದ್ಧ ದೂರು ನೀಡಿದ್ದಾರೆ.
ಏನಿದು ಬಾರ್ ಗಲಾಟೆ ಕೇಸ್?
ಜನವರಿ 26ರಂದು ಅನಿಲ್ ಎಂಬಾತ ಬಾರ್ ಮುಂದೆ ಬಂದು ಗಲಾಟೆ ಮಾಡಿದ್ದಾನೆ. ಗ್ರಾಹಕರ ಜೊತೆ ಕ್ಯಾತೆ ತೆಗೆದಿದ್ದಾನೆ. ಬಾರ್ ಮಾಲೀಕ ವೆಂಕಟೇಶ್ ಶೆಟ್ಟಿ ಅವರಿಗೆ ಚಾಕು ತೋರಿಸಿ ಜೀವ ಬೆದರಿಕೆ ಒಡ್ಡಿದ್ದ ಎಂದು ಆರೋಪಿಸಲಾಗಿದೆ. ಪೊಲೀಸರಿಗೆ ವಿಚಾರ ತಿಳಿದು ಅನಿಲನನ್ನು ಠಾಣೆ ಎಳೆದೊಯ್ದಿದ್ದರು.
ಜನವರಿ 30ರಂದು ಅನಿಲ, ಮುನ್ನಾ ಮತ್ತಿತರೆ ಯುವಕರನ್ನು ಇದೆ ಬಾರ್’ಗೆ ಕರೆದುಕೊಂಡು ಬಂದಿದ್ದ. ಎಲ್ಲರೂ ಮದ್ಯ ಸೇವಿಸಿ ಬಾರ್’ನಲ್ಲಿ ಗಲಾಟೆ ಆರಂಭಿಸಿದ್ದಾರೆ. ಗ್ರಾಹಕರ ಜೊತೆಗೂ ಜಗಳ ಮಾಡಿದ್ದಾರೆ. ಬಳಿಕ ಬರ್ ಮುಂದೆ ನಿಂತು ದಾರಿಯಲ್ಲಿ ಹೋಗಿ ಬರುವವರು ಮತ್ತು ಬಾರ್’ನಿಂದ ಹೊರಗೆ ಹೋಗುತ್ತಿದ್ದ ಗ್ರಾಹಕರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನು ಪ್ರಶ್ನಿಸಲು ಹೋದ ಬಾರ್ ಸಿಬ್ಬಂದಿ ಮೇಲೂ ಕಲ್ಲು ತೂರಿದ್ದಾರೆ. ಅಲ್ಲದೆ ಕೆಲವರ ಮೇಲೆ ಕೈ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Shimoga Police | About Shivamogga Live