SHIVAMOGGA LIVE NEWS | 17 MAY 2023
SHIMOGA : ಕತ್ತಲಾಗುತ್ತಿದ್ದಂತೆ ಕಿಡಿಗೇಡಿಗಳ ಮನೆಗಳ ಮೇಲೆ ಕಲ್ಲು (Stone) ತೂರಾಟ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ದೂರು ನೀಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಸೂಕ್ತ ತನಿಖೆಗೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಶಿವಮೊಗ್ಗದ ಮಾರ್ನಮಿಬೈಲ್ನ ಜೆ.ಸಿ.ನಗರದಲ್ಲಿ ಕತ್ತಲಾಗುತ್ತಿದ್ದಂತೆ ಮನೆಗಳ ಮೇಲೆ ಕಲ್ಲು (Stone) ತೂರಲಾಗುತ್ತಿದೆ. ಇದರಿಂದ ಹಲವು ಮನೆಗಳ ಹೆಂಚು, ಶೀಟ್ ಹಾನಿಯಾಗಿದೆ. ರಿಪೇರಿ ಮಾಡಿಸಿ ಮನೆಯವರು ಹೈರಾಣಾಗಿದ್ದಾರೆ. ಕಲ್ಲು ತೂರಾಟದಿಂದಾಗಿ ಮನೆಯಲ್ಲಿರುವವರು ಆತಂಕಕ್ಕೀಡಾಗಿದ್ದಾರೆ. ಈ ಹಿನ್ನೆಲೆ ಅಂದಾನಮ್ಮ ಎಂಬುವವರು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದು, ಎಫ್ಐಆರ್ ದಾಖಲಿಸುವಂತೆ ಆದೇಶಿಸಲಾಗಿದೆ.
ಇದನ್ನೂ ಓದಿ – ಹೊಸಮನೆಯಲ್ಲಿರುವ ಮಗನ ಮನೆಯಲ್ಲಿ ರಾತ್ರಿ ಉಳಿದಿದ್ದ ತಂದೆ, ಬೆಳಗೆದ್ದು ಬಾಗಿಲು ತೆಗೆದಾಗ ಕಾದಿತ್ತು ಶಾಕ್
ದೊಡ್ಡಪೇಟೆ ಠಾಣೆಯಲ್ಲಿ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200