SHIMOGA, 15 AUGUST 2024 : ನಗರದಲ್ಲಿ ಮನೆಯೊಂದರ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ (Stone Pelting). ಬಾಗಿಲು ತೆಗೆದು ನೋಡಲು ಹೋದಾಗ ವೃದ್ಧನ ಮೇಲೆ ಇಟ್ಟಿಗೆ ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ.
ಶಿವಮೊಗ್ಗದ ಕಾಮಾಕ್ಷಿ ಬೀದಿಯ ರಾಮಣ್ಣ ಎಂಬುವವರ ಮನೆ ಮೇಲೆ ಕಲ್ಲು ತೂರಲಾಗಿದೆ. ಆ.11ರ ರಾತ್ರಿ ರಾಮಣ್ಣ ಅವರು ಊಟ ಮುಗಿಸಿ ಮಾತ್ರೆ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಹೊರಗೆ ಶಬ್ದವಾಗಿದೆ. ರಾಮಣ್ಣ ಮತ್ತು ಅವರ ಪತ್ನಿ ಬಾಗಿಲು ತೆಗೆದಾಗ ಕಿಡಿಗೇಡಿಗಳು ತೂರಿದ ಇಟ್ಟಿಗೆ ರಾಮಣ್ಣ ಅವರ ಭುಜದ ಮೇಲೆ ಬಿದ್ದಿದೆ. ಕೂಡಲೆ ಮೊಮ್ಮಗನಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.
ಪೊಲೀಸ್ ಠಾಣೆಗೆ ದೂರು ನೀಡಲು ಮೊಮ್ಮಗನೊಂದಿಗೆ ತೆರಳುತ್ತಿದ್ದಾಗ ಕಿಡಿಗೇಡಿಗಳು ಪುನಃ ಕಲ್ಲು ತೂರಿದ್ದಾರೆ. ಅದೃಷ್ಟವಶಾತ್ ಪಾರಾಗಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ರಾಮಣ್ಣ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ ಶಿವಮೊಗ್ಗದ ಸರ್ಕಾರಿ ಕಚೇರಿಗಳು ಜಗಮಗ, ಸಿಟಿ ಸೆಂಟರ್ನಲ್ಲಿ ತ್ರಿವರ್ಣ ಅಲಂಕಾರ, ಎಲ್ಲೆಲ್ಲು ಸ್ವಾತಂತ್ರ್ಯ ಸಂಭ್ರಮ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200