SHIMOGA, 15 AUGUST 2024 : ನಗರದಲ್ಲಿ ಮನೆಯೊಂದರ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ (Stone Pelting). ಬಾಗಿಲು ತೆಗೆದು ನೋಡಲು ಹೋದಾಗ ವೃದ್ಧನ ಮೇಲೆ ಇಟ್ಟಿಗೆ ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದ ಕಾಮಾಕ್ಷಿ ಬೀದಿಯ ರಾಮಣ್ಣ ಎಂಬುವವರ ಮನೆ ಮೇಲೆ ಕಲ್ಲು ತೂರಲಾಗಿದೆ. ಆ.11ರ ರಾತ್ರಿ ರಾಮಣ್ಣ ಅವರು ಊಟ ಮುಗಿಸಿ ಮಾತ್ರೆ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಹೊರಗೆ ಶಬ್ದವಾಗಿದೆ. ರಾಮಣ್ಣ ಮತ್ತು ಅವರ ಪತ್ನಿ ಬಾಗಿಲು ತೆಗೆದಾಗ ಕಿಡಿಗೇಡಿಗಳು ತೂರಿದ ಇಟ್ಟಿಗೆ ರಾಮಣ್ಣ ಅವರ ಭುಜದ ಮೇಲೆ ಬಿದ್ದಿದೆ. ಕೂಡಲೆ ಮೊಮ್ಮಗನಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.
ಪೊಲೀಸ್ ಠಾಣೆಗೆ ದೂರು ನೀಡಲು ಮೊಮ್ಮಗನೊಂದಿಗೆ ತೆರಳುತ್ತಿದ್ದಾಗ ಕಿಡಿಗೇಡಿಗಳು ಪುನಃ ಕಲ್ಲು ತೂರಿದ್ದಾರೆ. ಅದೃಷ್ಟವಶಾತ್ ಪಾರಾಗಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ರಾಮಣ್ಣ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ ಶಿವಮೊಗ್ಗದ ಸರ್ಕಾರಿ ಕಚೇರಿಗಳು ಜಗಮಗ, ಸಿಟಿ ಸೆಂಟರ್ನಲ್ಲಿ ತ್ರಿವರ್ಣ ಅಲಂಕಾರ, ಎಲ್ಲೆಲ್ಲು ಸ್ವಾತಂತ್ರ್ಯ ಸಂಭ್ರಮ
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






