ಶಿವಮೊಗ್ಗದ ಲೈವ್.ಕಾಂ | SHIMOGA NEWS | 1 ಫೆಬ್ರವರಿ 2022
ಗಲಾಟೆ ತಡೆಯಲು ಹೋದ ಪೊಲೀಸರನ್ನೇ ಎಳೆದಾಡಿ, ಪೊಲೀಸ್ ವಾಹನದ ಮೇಲೆ ಕಲ್ಲು ತೂರಲಾಗಿದೆ. ಘಟನೆಯಲ್ಲಿ ಪೊಲೀಸ್ ವಾಹನದ ಹಿಂಬದಿ ಗಾಜು ಪುಡಿಯಾಗಿದೆ.
ಶಿವಮೊಗ್ಗದ ಬೊಮ್ಮನಕಟ್ಟೆಯ ಎ ಬ್ಲಾಕ್’ನ ಮರಿಯಮ್ಮ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ. ರಾತ್ರಿ ಗಲಾಟೆಯಾಗುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ, ಪೊಲೀಸರು ಸ್ಥಳಕ್ಕೆ ತೆರಳಿದ್ದರು.
ವಾಹನದ ಮೇಲೆ ಕಲ್ಲು ತೂರಿದ್ದೇಕೆ?
ಬೊಮ್ಮನಕಟ್ಟೆ ಬಳಿ ಯುವಕರ ಗುಂಪುಗಳ ಮಧ್ಯೆ ಗಲಾಟೆಯಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಪೊಲೀಸ್ ಬರುತ್ತಿರುವುದನ್ನು ಗಮನಿಸಿದ ಕೆಲವರು ಸ್ಥಳದಿಂದ ಓಡಿ ಹೋಗಿದ್ದಾರೆ.
ಗಲಾಟೆ ಮಾಡುತ್ತಿದ್ದ ಯುವಕರನ್ನು ವಿಚಾರಿಸಲು ತೆರಳಿದ ಪೊಲೀಸ್ ಸಿಬ್ಬಂದಿ ಶಿವರಾಮ್, ಚಾಲಕ ಮನು ಅವರನ್ನು ಯುವಕರು ಎಳೆದಾಡಿದ್ದಾರೆ. ಅಲ್ಲದೆ ಪೊಲೀಸ್ ವಾಹನದ ಹಿಂಬದಿಗೆ ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಪೊಲೀಸ್ ವಾಹನದ ಹಿಂಬದಿ ಗಾಜು ಪುಡಿಯಾಗಿದೆ.
ಹೆಚ್ಚುವರಿ ಪೊಲೀಸರು ದೌಡು
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರ ತಿಳಿಯುತ್ತಿದ್ದಂತೆ ಹೆಚ್ಚುವರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಕೆಲವು ಯುವಕರು ಸ್ಥಳದಿಂದ ಓಡಿ ಹೋಗಿದ್ದಾರೆ. ಒಂಭತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಬರ್, ವಿನೋದ, ಸದ್ದಾಂ, ಪುನೀತ, ವಿನೋದ, ಅರುಣ, ಸಂತೋಷ್, ಯೋಗೀಶ, ಪ್ರಮೋದ ಬಂಧಿತರು. ಅಕ್ಮಲ್, ರಫೀಕ್, ರಘು, ದೇವರಾಜ, ಅಶು, ವಾಸು, ಮುನಿಯಪ್ಪ, ಹಫೀಜ್, ರಾಜೇಶ, ರಕ್ಷಿತ್, ಅಲನ್, ನಯಾಜ್, ಪ್ರವೀಣ್, ಇಮ್ತಿಯಾಜ್ ಎಂಬುವವರು ಪರಾರಿಯಾಗಿದ್ದರು.
ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆದಿದೆ.
shimoga, police | About Shivamogga Live
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200