ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 MAY 2024
SHIMOGA : ಬಾರ್ ಒಂದರಲ್ಲಿ ಮೊಸರಿನ ವಿಚಾರವಾಗಿ ಗ್ರಾಹಕ ಮತ್ತು ಸಪ್ಲಯರ್ಗಳ (SUPPLIERS) ಮಧ್ಯೆ ಗಲಾಟೆಯಾಗಿ, ಕೈ ಕೈ ಮಿಲಾಯಿಸಿದ್ದಾರೆ. ಗ್ರಾಹಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾರ್ಡನ್ ಏರಿಯಾದ ಬಾರ್ ಒಂದರಲ್ಲಿ ಘಟನೆ ನಡೆದಿದೆ. ಕಾಶಿಪುರದ ಮುರುಡೇಶ್ವರ ಎಂಬುವವರು ಬಾರ್ನಲ್ಲಿ ಮದ್ಯ ಸೇವಿಸಿದ್ದರು. ರಾತ್ರಿ 10.30ಕ್ಕೆ ಹೊರಡುವ ಮುನ್ನ ಮೊಸರು ಬೇಕು ಎಂದು ಮುರುಡೇಶ್ವರ ಆರ್ಡರ್ ಮಾಡಿದ್ದರು. ಸ್ವಲ್ಪ ಹೊತ್ತಿನ ಬಳಿಕ ಹಿಂತಿರುಗಿದ ವೇಯ್ಟರ್ ಅಡುಗೆ ಮನೆ ಬಂದ್ ಆಗಿದೆ. ಮೊಸರು ಸಿಗುವುದಿಲ್ಲ ಎಂದು ತಿಳಿಸಿದ್ದಾರೆ. ಇಷ್ಟು ಹೊತ್ತು ಕಾಯಿಸಿದ್ದೇಕೆ ಎಂದು ಮುರುಡೇಶ್ವರ ಪ್ರಶ್ನೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದನ್ನೂ ಓದಿ – ಫೋಟೊಗ್ರಾಫರ್ ದುರ್ಮರಣ, ಬೈಕ್ಗಳ ಅಪಘಾತದಲ್ಲಿ ಒಬ್ಬ ಸಾವು, ಮತ್ತೊಬ್ಬರ ಗಂಭೀರ
ಈ ವೇಳೆ ಗ್ರಾಹಕ ಮುರುಡೇಶ್ವರ ಮತ್ತು ವೇಯ್ಟರ್ ಮಧ್ಯೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ಬಾರ್ನ ಐದಾರು ವೇಯ್ಟರ್ಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
LATEST NEWS
- ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್ನಲ್ಲಿ ಕಮಿಷನರ್ ಸಿಟಿ ರೌಂಡ್ಸ್

- ಶಿವಮೊಗ್ಗ, ಸಾಗರದಲ್ಲಿ ಕೆಲಸ ಹುಡುಕ್ತಿದ್ದೀರಾ? ಫೆಬ್ರವರಿ 18ರಂದು ನಡೆಯಲಿದೆ ಸಂದರ್ಶನ

- ಶಿವಮೊಗ್ಗ ಲೈವ್ BIG IMPACT, ಡೇಂಜರಸ್ ಹಂಪ್ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್

- ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

- ಫುಡ್ ಕೋರ್ಟ್ನಿಂದ ಹೊರ ಬಂದ ವ್ಯಕ್ತಿಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹೊಡೆದು ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು






