SHIVAMOGGA LIVE NEWS | 26 APRIL 2023
SHIMOGA : ಬೀಗ ಹಾಕಿದ್ದ ಮನೆಯೊಂದರ ಮುಂದೆ ಅನುಮಾನಾಸ್ಪದವಾಗಿ (Suspect) ನಿಂತಿದ್ದ ವ್ಯಕ್ತಿಯೊಬ್ಬನನ್ನು ರಾತ್ರಿ ಗಸ್ತು ಪೊಲೀಸರು ವಿಚಾರಣೆ ಮಾಡಿ, ಬಂಧಿಸಿದ್ದಾರೆ. ಶಿವಮೊಗ್ಗದ ವಿದ್ಯಾನಗರದಲ್ಲಿ ಘಟನೆ ಸಂಭವಿಸಿದೆ.
ವಿದ್ಯಾನಗರದ 2ನೇ ಅಡ್ಡರಸ್ತೆಯಲ್ಲಿ ಕೋಟೆ ಠಾಣೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಮನೆಯೊಂದರ ಮುಂದೆ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ (Suspect) ನಿಂತಿದ್ದ. ಪೊಲೀಸರನ್ನು ಕಂಡ ಕೂಡಲೆ ಮರೆಯಾಗಲು ಯತ್ನಿಸಿದ್ದಾನೆ. ಪೊಲೀಸರು ಆತನನ್ನು ಹಿಡಿದು ವಿಚಾರಣೆ ಮಾಡಿದಾಗ ಸ್ಪಷ್ಟ ಉತ್ತರ ಹೇಳಿಲ್ಲ. ಒಂದೊಂದು ಸರ್ತಿ ಒಂದೊಂದು ಹೆಸರು, ಊರು ತಿಳಿಸಿದ್ದಾನೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ನಿವೃತ್ತ ಅರಣ್ಯಾಧಿಕಾರಿ, ಹಿಂದಿನ ತಹಶೀಲ್ದಾರ್ ಸಂಬಂಧಿ ಮನೆಯಲ್ಲಿ ಶೋಧ
ಹೆಚ್ಚಿನ ವಿಚಾರಣೆ ಮಾಡಿದಾಗ ತಾನು ಭದ್ರಾವತಿ ಹೊಸಮನೆಯ ಧರ್ಮರಾಜ್ ಎಂದು ತಿಳಿಸಿದ್ದಾನೆ. ಮನೆ ಕಳ್ಳತನ ಮಾಡುವ ಸಂಶಯವಿದ್ದಿದ್ದರಿಂದ ಆತನ ವಿರುದ್ದ ಪ್ರಕರಣ ದಾಖಲು ಮಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200