SHIVAMOGGA LIVE NEWS | 14 SEPTEMBER 2023
NEW DELHI : ಐಎಸ್ಐಎಸ್ ಉಗ್ರ ಸಂಘಟನೆಯ ಶಂಕಿತ (Suspected) ಉಗ್ರ ಅರಾಫತ್ ಅಲಿ ಎಂಬಾತನನ್ನು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಈತ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನವನು.
ಕೀನ್ಯಾ ದೇಶದ ನೈರೋಬಿಯಿಂದ ಅರಾಫತ್ ಅಲಿ ನವದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ. ಖಚಿತ ಮಾಹಿತಿ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಈತನನ್ನು ಬಂಧಿಸಿದ್ದಾರೆ.
ತಲೆಮರೆಸಿಕೊಂಡಿದ್ದ ಶಂಕಿತ
ಅರಾಫತ್ ಅಲಿ 2020ರಿಂದ ತಲೆಮರೆಸಿಕೊಂಡಿದ್ದ. ಐಎಸ್ಐಎಸ್ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ. ಈ ಸಂಘಟನೆಯ ವಿಚಾರಧಾರೆಯನ್ನು ಭಾರತದಲ್ಲಿರುವ ಯುವಕರಿಗೆ ತಿಳಿಸಿ ಉಗ್ರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತಿದ್ದ ಎಂದು ಎನ್ಐಎ ತಿಳಿಸಿದೆ. ಈತನ ಪ್ರೇರಣೆಯಿಂದಾಗಿಯೇ ತೀರ್ಥಹಳ್ಳಿಯ ಶಂಕಿತ ಮೊಹಮ್ಮದ್ ಶಾರೀಕ್ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟಕ್ಕೆ ಮುಂದಾಗಿದ್ದ. ಆದರೆ ಮಾರ್ಗ ಮಧ್ಯೆ ಆಟೋದಲ್ಲಿಯೇ ಬಾಂಬ್ ಸ್ಪೋಟಗೊಂಡಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
2020ರಲ್ಲಿ ಮಂಗಳೂರಿನಲ್ಲಿ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬ ಪರವಾಗಿ ಗೋಡೆ ಬರಹ ಪ್ರಕಟಿಸಲಾಗಿತ್ತು. ಶಂಕಿತರಾದ ಮೊಹಮ್ಮದ್ ಶಾರೀಕ್ ಮತ್ತು ಮಾಜ್ ಮುನೀರ್ ಈ ಪ್ರಕರಣದ ಆರೋಪಿಗಳು. ಇವರಿಬ್ಬರಿಗು ಅರಾಫತ್ ಅಲಿ ಪ್ರೇರಣೆ ನೀಡಿದ್ದ ಎಂಬ ಆರೋಪವು ಇದೆ. ಈ ಹಿನ್ನೆಲೆ ಶಂಕಿತ ಅರಾಫತ್ ಅಲಿಯನ್ನು ಬಂಧಿಸಿರುವ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200