SHIVAMOGGA LIVE NEWS, 3 JANUARY 2024
ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರು ದುರ್ಬಳಕೆ ಮಾಡಿಕೊಂಡು, ಹೊಸ ವರ್ಷಕ್ಕೆ, ವಿಷ ಪದಾರ್ಥ ಬೆರೆಸಿರುವ ಸಿಹಿ (Sweets) ತಿಂಡಿ ರವಾನಿಸಿರುವ ಅನುಮಾನ ವ್ಯಕ್ತವಾಗಿದೆ. ಈ ಸಂಬಂಧ ಡಾ. ಧನಂಜಯ ಸರ್ಜಿ ಅವರ ಆಪ್ತ ಕಾರ್ಯದರ್ಶಿ ದೂರು ನೀಡಿದ್ದಾರೆ.
ಹೊಸ ವರ್ಷದ ಶುಭ ಕೋರುವ ಪತ್ರದೊಂದಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ನಾಗರಾಜ್ ಅವರಿಗೆ ಕೊರಿಯರ್ ಮೂಲಕ ಸಿಹಿ ತಿಂಡಿ ತಲುಪಿತ್ತು. ಪೊಟ್ಟಣದಲ್ಲಿದ್ದ ಸ್ವೀಟ್ ಸೇವಿಸಿದ ನಾಗರಾಜ್ ಅವರಿಗೆ ಅತ್ಯಂತ ಕಹಿ ಅನಿಸಿದೆ. ಡಾ. ಧನಂಜಯ ಸರ್ಜಿ ಅವರಿಗೆ ಕರೆ ಮಾಡಿದಾಗ ತಾವು ಯಾವುದೇ ಸ್ವೀಟ್ ಬಾಕ್ಸ್ ಕಳಹಿಸಿಲ್ಲ ಎಂದು ಸ್ಪಷ್ಟಪಡಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಡಾ. ಧನಂಜಯ ಸರ್ಜಿ ಅವರ ಹೆಸರು ದುರ್ಬಳಕೆ ಮಾಡಿಕೊಂಡು ಸಿಹಿ (Sweets) ತಿಂಡಿ ಕಳುಹಿಸಲಾಗಿದೆ. ಅದರಲ್ಲಿ ವಿಷ ಪದಾರ್ಥ ಬೆರಸಿರುವ ಅನುಮಾನವಿದೆ ಎಂದು ಆರೋಪಿಸಿ ಡಾ. ಧನಂಜಯ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಸಚಿನ್ ರಾಜ್ ದೂರು ನೀಡಿದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಹೊಸ ವರ್ಷದ ರಾತ್ರಿಯ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್, ಕಾರು ಚಾಲಕನ ವಿರುದ್ಧ ಮರ್ಡರ್ ಕೇಸ್, ಯಾಕೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200