ತೀರ್ಥಹಳ್ಳಿ ಬಳಿ ಅಪಘಾತ, ತರೀಕೆರೆಯ ಇಬ್ಬರಿಗೆ ಗಾಯ, ಚಿಕಿತ್ಸೆಗಾಗಿ ಒಬ್ಬಾತ ಬೆಂಗಳೂರಿಗೆ ಶಿಫ್ಟ್‌, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 APRIL 2024

THIRTHAHALLI : ಮುಡುಬದಲ್ಲಿ ಕಾಲು ನೋವಿಗೆ ನಾಟಿ ಔಷಧಿ ಪಡೆದು, ಶೃಂಗೇರಿಗೆ ತೆರಳುತ್ತಿದ್ದಾಗ ಗೂಡ್ಸ್‌ ವಾಹನ ಡಿಕ್ಕಿ ಹೊಡೆದು, ತರೀಕೆರೆಯ ಇಬ್ಬರು ಬೈಕ್‌ ಸವಾರರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ತುಡುಕಿ ಬಳಿ ಘಟನೆ ಸಂಭವಿಸಿದೆ.

ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಗೂಡ್ಸ್‌ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತರೀಕೆರೆಯ ಮಣಿಕಂಠ ಮತ್ತು ಯೋಗೇಶ್‌ ಎಂಬುವವರು ಗಾಯಗೊಂಡಿದ್ದಾರೆ. ಅಪಘಾತಪಡಿಸಿದ ಗೂಡ್ಸ್‌ ವಾಹನ ಸ್ಥಳದಲ್ಲಿ ನಿಲ್ಲದೆ ತೆರಳಿದೆ ಎಂದು ಆರೋಪಿಸಲಾಗಿದೆ.

ಗಾಯಾಳುಗಳಿಗೆ ತೀರ್ಥಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯೋಗೇಶ್‌ಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಕಸ ಬಿಸಾಡಲು ಮನೆಯಿಂದ ಹೊರ ಬಂದ ಮಹಿಳೆ ಸಾವು, ಹೆದ್ದಾರಿ ಮೇಲಿತ್ತು ಮೃತದೇಹ, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment