ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SORABA NEWS, 2 OCTOBER 2024 : ರಸ್ತೆಯಲ್ಲಿ ಹಾವು (Snake) ಅಡ್ಡ ಬಂತು ಅಂತಾ ಬೈಕ್ ನಿಲ್ಲಿಸಿಕೊಂಡು ಪಕ್ಕದಲ್ಲಿ ನಿಂತಿದ್ದ ಶಿಕ್ಷಕರೊಬ್ಬರಿಗೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದಾರೆ. ಸೊರಬ ತಾಲೂಕಿನ ಸೊರಬ – ಜಂಗಿನಕೊಪ್ಪ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಕೆಲಸ ಮುಗಿಸಿ ಶಿಕ್ಷಕ ನಟರಾಜ್ ಕುಬಟೂರು ಅವರು ಬೈಕ್ನಲ್ಲಿ ಮನೆಗೆ ಮರಳುತ್ತಿದ್ದರು. ರಸ್ತೆಯಲ್ಲಿ ಹಾವು ಬಂದಿದ್ದರಿಂದ ಬೈಕ್ ನಿಲ್ಲಿಸಿ, ಹಿಂಬದಿಗೆ ಬಂದು ನಿಂತಿದ್ದರು. ಈ ವೇಳೆ ಸೊರಬ ಕಡೆಯಿಂದ ವೇಗವಾಗಿ ಬಂದ ಸ್ಪ್ಲೆಂಡರ್ ಬೈಕ್, ಶಿಕ್ಷಕ ನಟರಾಜ್ ಅವರಿಗೆ ಡಿಕ್ಕಿ ಹೊಡೆದಿದೆ. ಕಾಲಿಗೆ ಗಂಭೀರ ಗಾಯವಾಗಿದ್ದು, ಭುಜ, ಮೂಗು ಸೇರಿದಂತೆ ವಿವಿಧೆಡೆ ಗಾಯವಾಗಿತ್ತು.
ಶಿಕ್ಷಕ ನಟರಾಜ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಘಟನೆ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳ್ಳುಳ್ಳಿಗಾಗಿ ಅಧಿಕಾರಿಗಳ ದಾಳಿ, ಸ್ಯಾಂಪಲ್ ಸಂಗ್ರಹ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






