SHIVAMOGGA LIVE NEWS | 10 JULY 2024
SHIMOGA : ದೇವಸ್ಥಾನದ (Temple) ಬಾಗಿಲನ್ನು ಮೀಟಿ ತೆಗೆದು ಹುಂಡಿ ಒಡೆದು ಕಾಣಿಕೆ ಹಣ ಕಳವು ಮಾಡಲಾಗಿದೆ. ಶಿವಮೊಗ್ಗ ತಾಲೂಕು ಆಲದಹಳ್ಳಿ ಶ್ರೀ ವೀರಭದ್ರೇಶ್ವರ ಮತ್ತು ಹಾಲಸ್ವಾಮಿ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ.
ಅರ್ಚಕರು ಬೆಳಗ್ಗೆ ಪೂಜೆಗೆಂದು ದೇಗುಲಕ್ಕೆ ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಹುಂಡಿ ಒಡೆದು ಸುಮಾರು 7500 ರೂ. ಕಾಣಿಕ ಹಣ, ದೇವರ ಕೊರಳಿನ 3 ಬೆಳ್ಳಿಯ ಕರಡಿಗೆ, ದೇವರ ಚಿನ್ನದ ತಾಳಿ, ಚಿನ್ನದ ಗುಂಡುಗಳು, 2 ಸಿಸಿ ಕ್ಯಾಮರಾಗಳನ್ನು ಕದೊಯ್ದಿದ್ದಾರೆ.
ಜೂ.18ರಂದು ಘಟನೆ ಸಂಭವಿಸಿದೆ. ದೇವಸ್ಥಾನದ ಕಮಿಟಿಯವರು ಸಭೆ ನಡೆಸಿ ತೀರ್ಮಾನ ತೆಗೆದುಕೊಂಡ ಬಳಿಕ ದೂರು ನೀಡಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಇವತ್ತು ಭಾರಿ ಮಳೆ ಸಾಧ್ಯತೆ, ಎಷ್ಟಿರುತ್ತೆ ಇವತ್ತಿನ ತಾಪಮಾನ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200