SHIVAMOGGA LIVE NEWS | 30 APRIL 2024
SHIMOGA : ಗಾಂಧಿ ಬಜಾರ್ನ ಕಾಳಿಕ ಪರಮೇಶ್ವರಿ ದೇವಸ್ಥಾನದ ಬೀಗ ಮುರಿದು ದೇವರ ಆಭರಣ, ಹಣ ಕಳ್ಳತನ ಮಾಡಲಾಗಿದೆ. ದೇವಿಯ ಮೂರ್ತಿಯನ್ನು ಹಾನಿಗೊಳಿಸಲಾಗಿದೆ ಎಂದು ಆರೋಪಿಸಿ ದೇವಸ್ಥಾನದ ಅಧ್ಯಕ್ಷ ರಮೇಶ್ ದೂರು ನೀಡಿದ್ದಾರೆ.
ಏ.28ರಂದು ಬೆಳಗ್ಗೆ ದೇವಸ್ಥಾನದ ಮ್ಯಾನೇಜರ್ ಬಂದಾಗ ದೇಗುಲದ ಬಾಗಿಲಿನ ಬೀಗ ಮರಿದಿರುವುದು ಗೊತ್ತಾಗಿದೆ. ಗರ್ಭಗುಡಿಗೆ ಹಾಕಿದ್ದ ಬೀಗಗಳನ್ನು ಮುರಿಯಲಾಗಿತ್ತು. ಒಟ್ಟು 1.97 ಲಕ್ಷ ರೂ. ಮೌಲ್ಯ ಚಿನ್ನ, ಬೆಳ್ಳಿಯ ಆಭರಣ, 52 ಸಾವಿರ ರೂ. ನಗದು ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಇನ್ನು, ದೇವಿಯ ಮೂರ್ತಿಯ ಮುಖದ ಭಾಗದಲ್ಲಿ ಗೀಚಿ ಹಾನಿಗೊಳಿಸಲಾಗಿದೆ ಎಂದು ಆರೋಪಿಸಿ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಬೆಂಕಿ, ಸುಟ್ಟು ಕರಕಲಾಯ್ತು ಅಂಗಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200