ಶಿವಮೊಗ್ಗ ಲೈವ್.ಕಾಂ | AYANUR NEWS | 7 ಸೆಪ್ಟೆಂಬರ್ 2021
ಅಂಗಡಿಯೊಂದರ ಬಾಗಿಲು ಮುರಿದು ಒಳ ನಗ್ಗಿದ ಕಳ್ಳರು ಹಣಕ್ಕಿಂತಲೂ ಹೆಚ್ಚಿನ ಮೊತ್ತದ ಗುಟ್ಕಾ, ಸಿಗರೇಟು ಕದ್ದು ಪರಾರಿಯಾಗಿದ್ದಾರೆ. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಯನೂರಿನ ಬಿ.ಹೆಚ್.ರಸ್ತೆಯಲ್ಲಿರುವ ಭರತ್ ರಾಜ್ ಅವರಿಗೆ ಸೇರಿದ ಸಿದ್ಧೇಶ್ವರ ಪ್ರಾವಿಜನ್ ಸ್ಟೋರ್’ನಲ್ಲಿ ಕಳ್ಳತನವಾಗಿದೆ. ಅಂಗಡಿಯ ರೋಲಿಂಗ್ ಶೆಟರ್ ಮುರಿದು ಖದೀಮರು ಕೈಚಳಕ ತೋರಿಸಿದ್ದಾರೆ.
ಗುಟ್ಕಾ, ಸಿಗರೇಟ್ ಕಳವು
ಖದೀಮರು ಅಂಗಡಿಯಲ್ಲಿ ಸುಮಾರು 5 ಸಾವಿರ ರೂ. ನಗದು ಕದ್ದಿದಾರೆ. ಆದರೆ ಇದಕ್ಕಿಂತಲೂ ಹೆಚ್ಚಿನ ಮೊತ್ತದ ಗುಟ್ಕಾ, ಸಿಗರೇಟು ಕಳವು ಮಾಡಿದ್ದಾರೆ. ಹತ್ತು ಬಾಕ್ಸ್ RMD, ಎರಡು ಬ್ಯಾಗ್ ವಿಮಲ್, ಎರಡು ಬ್ಯಾಗ್ ಮಧು, ಎರಡು ಬ್ಯಾಗ್ ಸ್ಟಾರ್ ಗುಟ್ಕಾ, ನಾಲ್ಕು ಬಂಡಲ್ ಸಿಗರೇಟ್ ಕದ್ದೊಯ್ದಿದ್ದಾರೆ.
ಒಟ್ಟು ಸಮಾರು 75 ಮೌಲ್ಯದ ವಸ್ತುಗಳು ಮತ್ತು ನಗದು ಕಳ್ಳತನವಾಗಿದೆ ಎಂದು ಭರತ್ ರಾಜ್ ಅವರು ದೂರಿನಲ್ಲಿ ತಿಳಿಸಿದ್ದಾರೆ. ಕುಂಸಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200