ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | AYANUR NEWS | 7 ಸೆಪ್ಟೆಂಬರ್ 2021
ಅಂಗಡಿಯೊಂದರ ಬಾಗಿಲು ಮುರಿದು ಒಳ ನಗ್ಗಿದ ಕಳ್ಳರು ಹಣಕ್ಕಿಂತಲೂ ಹೆಚ್ಚಿನ ಮೊತ್ತದ ಗುಟ್ಕಾ, ಸಿಗರೇಟು ಕದ್ದು ಪರಾರಿಯಾಗಿದ್ದಾರೆ. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಯನೂರಿನ ಬಿ.ಹೆಚ್.ರಸ್ತೆಯಲ್ಲಿರುವ ಭರತ್ ರಾಜ್ ಅವರಿಗೆ ಸೇರಿದ ಸಿದ್ಧೇಶ್ವರ ಪ್ರಾವಿಜನ್ ಸ್ಟೋರ್’ನಲ್ಲಿ ಕಳ್ಳತನವಾಗಿದೆ. ಅಂಗಡಿಯ ರೋಲಿಂಗ್ ಶೆಟರ್ ಮುರಿದು ಖದೀಮರು ಕೈಚಳಕ ತೋರಿಸಿದ್ದಾರೆ.
ಗುಟ್ಕಾ, ಸಿಗರೇಟ್ ಕಳವು
ಖದೀಮರು ಅಂಗಡಿಯಲ್ಲಿ ಸುಮಾರು 5 ಸಾವಿರ ರೂ. ನಗದು ಕದ್ದಿದಾರೆ. ಆದರೆ ಇದಕ್ಕಿಂತಲೂ ಹೆಚ್ಚಿನ ಮೊತ್ತದ ಗುಟ್ಕಾ, ಸಿಗರೇಟು ಕಳವು ಮಾಡಿದ್ದಾರೆ. ಹತ್ತು ಬಾಕ್ಸ್ RMD, ಎರಡು ಬ್ಯಾಗ್ ವಿಮಲ್, ಎರಡು ಬ್ಯಾಗ್ ಮಧು, ಎರಡು ಬ್ಯಾಗ್ ಸ್ಟಾರ್ ಗುಟ್ಕಾ, ನಾಲ್ಕು ಬಂಡಲ್ ಸಿಗರೇಟ್ ಕದ್ದೊಯ್ದಿದ್ದಾರೆ.
ಒಟ್ಟು ಸಮಾರು 75 ಮೌಲ್ಯದ ವಸ್ತುಗಳು ಮತ್ತು ನಗದು ಕಳ್ಳತನವಾಗಿದೆ ಎಂದು ಭರತ್ ರಾಜ್ ಅವರು ದೂರಿನಲ್ಲಿ ತಿಳಿಸಿದ್ದಾರೆ. ಕುಂಸಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





