ತಿಥಿ ಕಾರ್ಯಕ್ಕೆ ಹೋಗಿದ್ದ ಗುತ್ತಿಗೆದಾರರ ಮನೆಯಲ್ಲಿ ಲಕ್ಷ ಲಕ್ಷ ಮೌಲ್ಯದ ಆಭರಣ, ನಗದು ಕಳವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಫೆಬ್ರವರಿ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದಲ್ಲಿ ಗುತ್ತಿಗೆದಾರರೊಬ್ಬರ ಮನೆಯ ಬಾಲ್ಕನಿಯ ಕಿಟಕಿ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಗುತ್ತಿಗೆದಾರರ ಕುಟುಂಬದವರು ಊರಿನಲ್ಲಿ ಇಲ್ಲದ ವೇಳೆ ಘಟನೆ ಸಂಭವಿಸಿದೆ.

Shimoga Nanjappa Hospital Cancer Care

ಬಸವನಗುಡಿಯಲ್ಲಿ ಇರುವ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಘಟನೆ ಸಂಭವಿಸಿದೆ. ಮಹಡಿ ಮನೆಯವರು ಮತ್ತು ಮನೆ ಕೆಲಸದಾಕೆ ಮೇಲೆ ಅನುಮಾನವಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಏನಿದು ಪ್ರಕರಣ?

ಗುತ್ತಿಗೆದಾರರು ತಮ್ಮ ತಾಯಿಯ ತಿಥಿ ಕಾರ್ಯಕ್ಕೆ ಕುಟುಂಬ ಸಹಿತ ಗೋಕರ್ಣಕ್ಕೆ ತೆರಳಿದ್ದರು. ಮನೆ ಕೆಲಸದಾಕೆ ಬರಲಿದ್ದು, ಆಕೆಗೆ ಕೀ ಕೊಡುವಂತೆ ತಿಳಿಸಿ, ತಮ್ಮ ಮನೆಯ ಮಹಡಿ ಮನೆಯವರಿಗೆ ಬೀಗ ಕೊಟ್ಟಿದ್ದರು.

ಗೋಕರ್ಣದಿಂದ ಹಿಂತಿರುಗಿದಾಗ ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಪರಿಶೀಲನೆ ನಡೆಸಿದಾಗ ಮನೆಯ ಬಾಲ್ಕನಿಯ ಕಿಟಕಿ ಸರಳು ಮುರಿದು ಕಳ್ಳರು ಒಳಪ್ರವೇಶ ಮಾಡಿರುವುದು ಕಂಡು ಬಂದಿದೆ.

ಏನೇನೆಲ್ಲ ಕಳವಾಗಿದೆ?

ಗುತ್ತಿಗೆದಾರರ ಮನೆಯಲ್ಲಿದ್ದ 263 ಗ್ರಾಂ ತೂಕದ 5.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ. ಅಲ್ಲದೆ ಮನೆಯಲ್ಲಿ ಇಟ್ಟಿದ್ದ 1.50 ಲಕ್ಷ ರೂ. ನಗದು ಕೂಡ ಕಣ್ಮರೆಯಾಗಿದೆ. ಕಳ್ಳರು ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮಹಡಿ ಮನೆಯವರು ಮತ್ತು ಮನೆ ಕೆಲಸದಾಕೆ ಮೇಲೆ ಗುತ್ತಿಗೆದಾರರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

Shimoga Live Total reach in January

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment