ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಫೆಬ್ರವರಿ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದಲ್ಲಿ ಗುತ್ತಿಗೆದಾರರೊಬ್ಬರ ಮನೆಯ ಬಾಲ್ಕನಿಯ ಕಿಟಕಿ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಗುತ್ತಿಗೆದಾರರ ಕುಟುಂಬದವರು ಊರಿನಲ್ಲಿ ಇಲ್ಲದ ವೇಳೆ ಘಟನೆ ಸಂಭವಿಸಿದೆ.
ಬಸವನಗುಡಿಯಲ್ಲಿ ಇರುವ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಘಟನೆ ಸಂಭವಿಸಿದೆ. ಮಹಡಿ ಮನೆಯವರು ಮತ್ತು ಮನೆ ಕೆಲಸದಾಕೆ ಮೇಲೆ ಅನುಮಾನವಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಏನಿದು ಪ್ರಕರಣ?
ಗುತ್ತಿಗೆದಾರರು ತಮ್ಮ ತಾಯಿಯ ತಿಥಿ ಕಾರ್ಯಕ್ಕೆ ಕುಟುಂಬ ಸಹಿತ ಗೋಕರ್ಣಕ್ಕೆ ತೆರಳಿದ್ದರು. ಮನೆ ಕೆಲಸದಾಕೆ ಬರಲಿದ್ದು, ಆಕೆಗೆ ಕೀ ಕೊಡುವಂತೆ ತಿಳಿಸಿ, ತಮ್ಮ ಮನೆಯ ಮಹಡಿ ಮನೆಯವರಿಗೆ ಬೀಗ ಕೊಟ್ಟಿದ್ದರು.
ಗೋಕರ್ಣದಿಂದ ಹಿಂತಿರುಗಿದಾಗ ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಪರಿಶೀಲನೆ ನಡೆಸಿದಾಗ ಮನೆಯ ಬಾಲ್ಕನಿಯ ಕಿಟಕಿ ಸರಳು ಮುರಿದು ಕಳ್ಳರು ಒಳಪ್ರವೇಶ ಮಾಡಿರುವುದು ಕಂಡು ಬಂದಿದೆ.
ಏನೇನೆಲ್ಲ ಕಳವಾಗಿದೆ?
ಗುತ್ತಿಗೆದಾರರ ಮನೆಯಲ್ಲಿದ್ದ 263 ಗ್ರಾಂ ತೂಕದ 5.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ. ಅಲ್ಲದೆ ಮನೆಯಲ್ಲಿ ಇಟ್ಟಿದ್ದ 1.50 ಲಕ್ಷ ರೂ. ನಗದು ಕೂಡ ಕಣ್ಮರೆಯಾಗಿದೆ. ಕಳ್ಳರು ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮಹಡಿ ಮನೆಯವರು ಮತ್ತು ಮನೆ ಕೆಲಸದಾಕೆ ಮೇಲೆ ಗುತ್ತಿಗೆದಾರರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






