SORABA NEWS, 22 SEPTEMBER 2024 : ಕುಟುಂಬದವರೆಲ್ಲ ಈದ್ ಮಿಲಾದ್ ಮೆರವಣಿಗೆ ನೋಡಲು ತೆರಳಿದ್ದಾಗ ಮನೆಯ ಬಾಗಿಲಿನ ಚಿಲಕ ಮುರಿದು ಕಳ್ಳತನ ಮಾಡಲಾಗಿದೆ. ಕೊಠಡಿಯಲ್ಲಿದ್ದ (ROOM) ಬೀರುವನ್ನು ಅಡ್ಡಲಾಗಿ ಬೀಳಿಸಿ, ಬಾಗಿಲನ್ನು ಮೀಟಿ ತೆಗೆದು ಚಿನ್ನಾಭರಣ, ನಗದು ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸೊರಬ ತಾಲೂಕು ಆನವಟ್ಟಿ ಸಮೀಪದ ತಲಗಡ್ಡೆ ಗ್ರಾಮದ ಮೊಹಮದ್ ಸಾದಿಕ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಬೀರುವಿನಲ್ಲಿದ್ದ 70 ಸಾವಿರ ರೂ. ನಗದು, ಚಿನ್ನದ ಸರ, ಉಂಗುರುಗಳು ಸೇರಿ 75 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ತಲಗಡ್ಡೆಯಲ್ಲಿ ಈದ್ ಮಿಲಾದ್ ಮೆರವಣಿಗೆ ಮುಗಿಸಿ ರಾತ್ರಿ 3.30ರ ಹೊರತ್ತಿಗೆ ಮೊಹಮದ್ ಸಾದಿಕ್ ಅವರು ಕುಟುಂಬ ಸಹಿತ ಮನೆಗೆ ಮರಳಿದ್ದಾರೆ. ಆಗ ಮನೆಯ ಚಿಲಕ ತೆಗೆದಿತ್ತು. ಗಾಬರಿಯಿಂದ ಒಳಗೆ ಹೋಗಿ ಪರಿಶೀಲಿಸಿದಾಗ ಕಳ್ಳತನವಾಗಿದೆ. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿ ಹಸಿರುಮಯ, ಎಎ ಸರ್ಕಲ್ ಜಗಮಗ
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






