ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 7 ಫೆಬ್ರವರಿ 2022
ಬೆಂಗಳೂರು – ತಾಳಗುಪ್ಪ ಇಂಟರ್ ಸಿಟಿ ರೈಲಿನಲ್ಲಿ ಪ್ರಯಾಣಿಕರೊಬ್ಬರ ಲ್ಯಾಪ್ ಟಾಪ್ ಬ್ಯಾಗ್ ಕಳ್ಳತನ ಮಾಡಲಾಗಿದೆ.
ಸಾಗರ ತಾಲೂಕಿನ ಹೊನ್ನೆಮರಡು ಗ್ರಾಮದ ಎಸ್.ಎಲ್.ಎನ್. ಸ್ವಾಮಿ ಅವರ ಬ್ಯಾಗ್ ಕಳುವಾಗಿದೆ. ಸ್ವಾಮಿ ಅವರು ಶುಕ್ರವಾರ ರಿಸರ್ವ್ ಕೋಚ್ನಲ್ಲಿ ಬೆಂಗಳೂರಿನಿಂದ ಅನಂದಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಪಕ್ಕದಲ್ಲಿ ಬ್ಯಾಗ್ ಇಟ್ಟುಕೊಂಡು ನಿದ್ರೆಗೆ ಜಾರಿದ್ದರು.
ಆನಂದಪುರದಲ್ಲಿ ಎಚ್ಚರಗೊಂಡಾಗ ಲ್ಯಾಪ್ಟಾಪ್, ಹಾರ್ಡ್ ಡಿಸ್ಕ್ ಇದ್ದ ಬ್ಯಾಗ್ ಕಳವು ಆಗಿರುವುದು ಗಮನಕ್ಕೆ ಬಂದಿದೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.
About Shivamogga Live | Shimoga District Profile | Whatsapp 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200