ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ದೇವಸ್ಥಾನದ (Temple) ಬಾಗಿಲಿನ ಬೀಗ ಮುರಿದು ಹುಂಡಿ ಒಡೆದು ಕಾಣಿಕೆ ಹಣ ಕಳ್ಳತನ ಮಾಡಲಾಗಿದೆ. ಹುಂಡಿ ಒಡೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಿವಮೊಗ್ಗ ತಾಲೂಕು ಕೋಟೆಗಂಗೂರಿನ ಅಜ್ಜಪ್ಪಸ್ವಾಮಿ ದೇವಸ್ಥಾನದಲ್ಲಿ ಜುಲೈ 12ರ ರಾತ್ರಿ ಕಳ್ಳತನವಾಗಿದೆ. ದೇವಸ್ಥಾನದ ಒಳಗೆ ನುಗ್ಗಿದ ಕಳ್ಳರು ಹುಂಡಿ ಒಡೆದು ಸುಮಾರು ₹60,000 ಕಾಣಿಕೆ ಹಣ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ದೂರಿನಲ್ಲಿ ಏನಿದೆ?
ಜು.12ರ ರಾತ್ರಿ 7 ಗಂಟೆಗೆ ಅರ್ಚಕ ಬಸವರಾಜಪ್ಪ ಪೂಜೆ ಮುಗಿಸಿ ದೇವಸ್ಥಾನದ ಬೀಗ ಹಾಕಿಕೊಂಡು ಹೋಗಿದ್ದರು. ಜು.13ರಂದು ಬೆಳಗ್ಗೆ ದೇವಸ್ಥಾನದ ಸ್ವಚ್ಛತಾ ಕಾರ್ಯಕ್ಕೆ ಜಯಣ್ಣ ಎಂಬುವವರು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸಿಸಿಟಿವಿಯಲ್ಲಿ ಕೃತ್ಯ ಸೆರೆ
ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನ ಮಾಡಿದ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರೇನ್ ಕೋಟ್ ಧರಿಸಿ ದೇವಸ್ಥಾನದ ಒಳಗೆ ನುಗ್ಗಿದ ಮೂವರು ಕಳ್ಳರು ಹುಂಡಿಯನ್ನು ಒಡೆದಿದ್ದಾರೆ. ಟವಲ್ನಲ್ಲಿ ಕಾಣಿಕೆ ಹಣನ್ನು ಸೇರಿಸಿ ಕೊಂಡೊಯ್ದಿದ್ದಾರೆ.
ಇದನ್ನೂ ಓದಿ » ಮೇಗರವಳ್ಳಿಯಲ್ಲಿ ಮಂಗಳೂರು ಎಕ್ಸ್ಪ್ರೆಸ್ ಬಸ್ಸು, ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ
ಕೃತ್ಯ ಸಂಬಂಧ ದೇವಸ್ಥಾನದ ಸಹ ಕಾರ್ಯದರ್ಶಿ ಜಗದೀಶ್ ದೂರು ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















