ಪೂಜೆ ಮುಗಿಸಿ ನವುಲೆಯ ಮನೆಗೆ ವಾಪಸಾದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Published On : ಏಪ್ರಿಲ್ 23, 2024

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | 23 APRIL 2024

SHIMOGA : ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಬಾಗಿಲಿನ ಬೀಗ ಮುರಿದು, ಬೀರುವಿನದ್ದ ಚಿನ್ನ, ಬೆಳ್ಳಿ ಆಭರಣ, ನಗದು ಕಳವು ಮಾಡಲಾಗಿದೆ. ಶಿವಮೊಗ್ಗ ನಗರದ ನವುಲೆಯ ಕುರುಬರ ಬೀದಿಯ ರವಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.

ರವಿ, ಅಲಸೆಯಲ್ಲಿ ದೇಗುಲಕ್ಕೆ ತೆರಳಿ, ಆಯನೂರಿನಲ್ಲಿರುವ ಸಹೋದರಿಯ ಮನೆಯಲ್ಲಿ ಉಳಿದು ಮರುದಿನ ಬೆಳಗ್ಗೆ ಮನೆಗೆ ಮರಳಿದಾ ಬಾಗಿಲು ತೆರೆದಂತಿತ್ತು. ಒಳ ಹೋಗಿ ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. 25 ಸಾವಿರ  ರೂ. ನಗದು, ಚಿನ್ನ, ಬೆಳ್ಳಿ ಆಭರಣಗಳು ಸೇರಿ ಒಟ್ಟು 74,650 ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಬಿಜೆಪಿಯಿಂದ ಈಶ್ವರಪ್ಪ ಉಚ್ಛಾಟನೆ, ಆದೇಶ ಪ್ರಕಟ, ಎಷ್ಟು ವರ್ಷ ಉಚ್ಛಾಟಿಸಲಾಗಿದೆ?

ನಮ್ಮ ಸೋಶಿಯಲ್ ಮೀಡಿಯಾ ಗ್ರೂಪ್ ಸೇರಿ

JNN College of Engineering Admissions started

© ಶಿವಮೊಗ್ಗ ಲೈವ್‌ : ಏಪ್ರಿಲ್ 23, 2024

Leave a Comment