SHIVAMOGGA LIVE NEWS | 23 APRIL 2024
SHIMOGA : ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಬಾಗಿಲಿನ ಬೀಗ ಮುರಿದು, ಬೀರುವಿನದ್ದ ಚಿನ್ನ, ಬೆಳ್ಳಿ ಆಭರಣ, ನಗದು ಕಳವು ಮಾಡಲಾಗಿದೆ. ಶಿವಮೊಗ್ಗ ನಗರದ ನವುಲೆಯ ಕುರುಬರ ಬೀದಿಯ ರವಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.
ರವಿ, ಅಲಸೆಯಲ್ಲಿ ದೇಗುಲಕ್ಕೆ ತೆರಳಿ, ಆಯನೂರಿನಲ್ಲಿರುವ ಸಹೋದರಿಯ ಮನೆಯಲ್ಲಿ ಉಳಿದು ಮರುದಿನ ಬೆಳಗ್ಗೆ ಮನೆಗೆ ಮರಳಿದಾ ಬಾಗಿಲು ತೆರೆದಂತಿತ್ತು. ಒಳ ಹೋಗಿ ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. 25 ಸಾವಿರ ರೂ. ನಗದು, ಚಿನ್ನ, ಬೆಳ್ಳಿ ಆಭರಣಗಳು ಸೇರಿ ಒಟ್ಟು 74,650 ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಬಿಜೆಪಿಯಿಂದ ಈಶ್ವರಪ್ಪ ಉಚ್ಛಾಟನೆ, ಆದೇಶ ಪ್ರಕಟ, ಎಷ್ಟು ವರ್ಷ ಉಚ್ಛಾಟಿಸಲಾಗಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200