ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 8 SEPTEMBER 2024 : ಅಧಿಕಾರಿಗಳ (Officers) ಕ್ವಾರ್ಟರ್ಸ್ನಲ್ಲಿರುವ ಐದು ಮನೆಗಳಲ್ಲಿ ಕಳ್ಳತನವಾಗಿದೆ. ಒಂದು ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನವಾಗಿದೆ. ಬಸವನಗುಡಿಯ ಆಫೀಸರ್ಸ್ ಕ್ವಾರ್ಟರ್ಸ್ನಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಬೆಳಗ್ಗೆ ಪ್ರಕರಣ ಬಯಲಿಗೆ ಬಂದಿದೆ.
ಜಿಲ್ಲಾಧಿಕಾರಿ ಆಪ್ತ ಸಹಾಯಕ ದೀಪಕ್, ನ್ಯಾಯಾಧೀಶರ ಕಾರು ಚಾಲಕ ಪ್ರಕಾಶ್, ಎಸ್ಡಿಎ ಸಂಧ್ಯಾ, ವಾಣಿಜ್ಯ ತೆರಿಗೆ ಇಲಾಖೆಯ ನಂದಿನಿ ಅವರ ಮನೆಯಲ್ಲಿ ಕಳ್ಳತನವಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿ ಭಾಗ್ಯ ಅವರ ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನವಾಗಿದೆ.
ಬೆಳಗ್ಗೆ ವಿಷಯ ಬಯಲಿಗೆ
ಕಳೆದ ರಾತ್ರಿ ಕೃತ್ಯ ನಡೆದಿದ್ದು ಇಂದು ಬೆಳಗ್ಗೆ ವಿಷಯ ಬೆಳಕಿಗೆ ಬಂದಿದೆ. ಮನೆಗಳ ಬೀಗ ಮುರಿದು ನುಗ್ಗಿರುವ ಕಳ್ಳರು ಒಳಗಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಚಿನ್ನಾಭರಣ, ನಗದು ಸೇರಿ ಹಲವು ವಸ್ತುಗಳು ಕಳ್ಳತನವಾಗಿದೆ ಎನ್ನಲಾಗಿದೆ. ಇವುಗಳ ನಿಖರ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

ಇದನ್ನೂ ಓದಿ » ಸಾವಿರ ಕೋಟಿಯ ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ಓಡಾಡುವಾಗ ಎಚ್ಚರ.. ಎಚ್ಚರ.., ಯಾಕೆ ಗೊತ್ತಾ?
ಹಬ್ಬ ಸೇರಿದಂತೆ ವಿವಿಧ ಕಾರಣಕ್ಕೆ ಅಧಿಕಾರಿಗಳು ಕುಟುಂಬ ಸಹಿತ ಊರಿಗೆ ಹೋಗಿದ್ದಾಗ ಕೃತ್ಯ ಎಸಗಲಾಗಿದೆ. ಬೆರಳಚ್ಚು ತಜ್ಞರು, ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದವು. ಜಯನಗರ ಠಾಣೆ ಇನ್ಸ್ಪೆಕ್ಟರ್ ಸಿದ್ದನಗೌಡ ಮತ್ತು ಸಿಬ್ಬಂದಿ ಪರಿಶೀಲಿಸಿದರು. ಜಯನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ರೈಲಲ್ಲಿ ಶಿವಮೊಗ್ಗಕ್ಕೆ ಬರುವವರಿಗೆ ಸ್ವಾಗತ ಕೋರುತ್ತಿದೆ ಮೃತ್ಯು ಕೂಪ, ರಕ್ತ ಹೀರಲು ಕಾಯುತ್ತಿದೆ ಚರಂಡಿ ಮುಚ್ಚಳ
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















