ಶಿವಮೊಗ್ಗ : ದೇವಸ್ಥಾನವೊಂದರ (Temple) ಬಾಗಿಲಿನ ಬೀಗ ಮುರಿದ ಕಳ್ಳರು ದೇವರ ಮೂರ್ತಿಗಳನ್ನೇ ಕದ್ದೊಯ್ದಿದ್ದಾರೆ. ಶಿವಮೊಗ್ಗ ನಗರದ ಆನಂದರಾವ್ ಬಡಾವಣೆಯ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ.
ಇದನ್ನೂ ಓದಿ » ಕಾಡು ಹಂದಿ ಬೇಟೆಯಾಡಿ ಮಾಂಸ ಹಂಚಿಕೊಳ್ಳುವಾಗ ಅರಣ್ಯಾಧಿಕಾರಿಗಳು ದಾಳಿ
ಬೆಳಗ್ಗೆ ಪೂಜೆಗೆಂದು ಅರ್ಚಕರು ದೇವಸ್ಥಾನಕ್ಕೆ ಬಂದಾಗ ಬಾಗಿಲಿಗೆ ಹಾಕಿದ್ದ ಬೀಗ ಮುರಿಯಲಾಗಿತ್ತು. ಒಳಗೆ ಹೋಗಿ ಪರಿಶೀಲಿಸಿದಾಗ ಹುಂಡಿ ಒಡೆದು ಸುಮಾರು 8 ಸಾವಿರ ರೂ. ಕಳ್ಳತನ ಮಾಡಲಾಗಿತ್ತು. ಇನ್ನು, ಒಳಗಿದ್ದ ಚೌಡೇಶ್ವರಿ ಮತ್ತು ಗಣಪತಿ ದೇವರ ಹಿತ್ತಾಳೆ ವಿಗ್ರಹಗಳು ಸೇರಿದಂತೆ ಒಟ್ಟು 40 ಸಾವಿರ ರೂ. ಮೌಲ್ಯದ ವಸ್ತುಗಳು ಕಳುವಾಗಿದೆ ಎಂದು ಆರೋಪಿಸಲಾಗಿದೆ.
ಘಟನೆ ಸಂಬಂಧ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200