ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಮಾಲೀಕರು ಊಟಕ್ಕೆ ತೆರಳಿದ್ದಾಗ ಹುಡುಗನೊಬ್ಬ ಅಂಗಡಿಯ (SHOP) ಒಳಗೆ ಬಗ್ಗಿ ಕ್ಯಾಶ್ ಡ್ರಾದಲ್ಲಿದ್ದ ಹಣ ಕಳ್ಳತನ ಮಾಡಿದ್ದಾನೆ. ಶಿವಮೊಗ್ಗ ನಗರದ ಸೀಗೆಹಟ್ಟಿಯ ಕೆಂಚರಾಯ ಬೀದಿಯ ಕಿರಾಣಿ ಅಂಗಡಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ » ಖಾಸಗಿ ಬಸ್, ಟಾಟಾ ಏಸ್ ಮುಖಾಮುಖಿ ಡಿಕ್ಕಿ, ಹತ್ತಕ್ಕು ಹೆಚ್ಚು ಕುರಿಗಳು ಸಾವು
ಅಂಗಡಿಯ ಮಾಲೀಕರಾದ ಸವಿತಾ ಅವರು ಮಧ್ಯಾಹ್ನ ಊಟಕ್ಕೆ ಮನೆಯ ಒಳಗೆ ತೆರಳಿದ್ದರು. ಆಗ ಅಂಗಡಿಯಿಂದ (SHOP) ಜೋರು ಶಬ್ದ ಕೇಳಿಸಿದೆ ಎಂದು ಮರಳಿದ್ದರು. ಅವರನ್ನು ಕಂಡು ಹುಡುಗನೊಬ್ಬ ಪರಾರಿಯಾಗಿದ್ದಾನೆ. ಸವಿತಾ ಅವರು ಅಂಗಡಿಗೆ ಬಂದಾಗ ಆ ಹುಡುಗ ಕ್ಯಾಶ್ ಡ್ರಾ ಕಡೆಗೆ ಬಗ್ಗಿ ಅದರೊಳಗೆ ಕೈ ಹಾಕಿದ್ದ. ಆಗ ಸವಿತಾ ಅವರು ಜೋರಾಗಿ ಕೂಗಿಕೊಂಡಿದ್ದು, ಆತ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಬಳಿಕ ಸಿಸಿಟಿವಿ ಪರಿಶೀಲಿಸಿದಾಗ ಮಧ್ಯಾಹ್ನ 2.57ರ ಹೊತ್ತಿಗೆ ಹುಡುಗ ಅಂಗಡಿಗೆ ಬಂದು ಕ್ಯಾಶ್ ಡ್ರಾದಲ್ಲಿದ್ದ ಹಣ ಕದ್ದೊಯ್ದಿದ್ದಾನೆ. ಸುಮಾರು 1500 ರೂ. ಹಣ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು















