SHIVAMOGGA LIVE NEWS | 30 DECEMBER 2022
ಹೊಸನಗರ : ಕೃಷಿ ಪತ್ತಿನ ಸಹಕಾರ ಸಂಘದ ಬಾಗಿಲಿನ ಬೀಗ (theft at society) ಮುರಿದು ನಗದು, ದೇವರ ಬೆಳ್ಳಿ ವಿಗ್ರಹ, ಸಿಸಿಟಿವಿ ಡಿವಿಆರ್ ಕಳ್ಳತನ ಮಾಡಲಾಗಿದೆ.
ಹೊಸನಗರ ತಾಲೂಕು ನಗರದ ನೀಲಕಂಠೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಬೆಳಗ್ಗೆ ಸ್ವಚ್ಛತಾ ಕಾರ್ಯ ನಡೆಸಲು ಸಿಬ್ಬಂದಿ ಬಂದಾಗ ಕಳ್ಳತನ ಬೆಳಕಿಗೆ (theft at society) ಬಂದಿದೆ.
ಇದನ್ನೂ ಓದಿ – ಮದುವೆಯಾಗಿ ಏಳು ತಿಂಗಳು, ಗಂಡನ ಮನೆಯಲ್ಲಿ ಗೃಹಿಣಿ ನೇಣಿಗೆ ಶರಣು
ಡಿ.28ರಂದು ಸಂಜೆ ಸಂಘದ ಸೇಲ್ಸ್ ಮನ್ ಅವರು ಕಚೇರಿಯ ಬೀಗ ಹಾಕಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಕೀ ತಲುಪಿಸಿದ್ದರು. ಮರುದಿನ ಬೆಳಗ್ಗೆ ಸಂಘದ ಸ್ವಚ್ಛತೆ ಮಾಡುವ ಮಹಿಳೆ ಬಂದಾಗ ಬಾಗಿಲಿನ ಬೀಗ ಮುರಿದಿರುವುದು ಗೊತ್ತಾಗಿದೆ. ಕೂಡಲೆ ಸಿಬ್ಬಂದಿಗೆ ವಿಚಾರ ತಿಳಿಸಿದ್ದಾರೆ.
ಸಂಘದ ಕಚೇರಿಯಲ್ಲಿದ್ದ 25 ಸಾವಿರ ರೂ. ನಗದು, 3 ಸಾವಿರ ರೂ. ಮೌಲ್ಯದ ಬೆಳ್ಳಿಯ ಗಣಪತಿ ಮೂರ್ತಿ, 20 ಸಾವಿರ ರೂ. ಮೌಲ್ಯದ ಸಿಸಿಟಿವಿ ಕ್ಯಾಮರಾ ಡಿವಿಆರ್ ಕಳ್ಳತನ ಮಾಡಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200