ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 JANUARY 2024
SHIRALAKOPPA : ಐತಿಹಾಸಿಕ ಕ್ಷೇತ್ರ ತೊಗರ್ಸಿ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ತಡರಾತ್ರಿ ಕಳ್ಳತನವಾಗಿದೆ. ದೇವಸ್ಥಾನದ ಬೆಳ್ಳಿ ಮಂಟಪದ ಕಳಶ, ಬೆಳ್ಳಿ ದೀಪ, ಲಿಂಗದ ಪಾಣಿಪೀಠಕ್ಕೆ ಹೊದಿಸಿದ್ದ ಬೆಳ್ಳಿ ಕವಚ, ವಿವಿಧ ಪೂಜಾ ಸಾಮಗ್ರಿಗಳು ಸೇರಿದಂತೆ ಅಂದಾಜು 15 ಕೆ.ಜಿ ತೂಕದ ಬೆಳ್ಳಿ ವಸ್ತುಗಳು ಕಳುವಾಗಿದೆ.
ಕರೆಂಟ್ ಕಟ್ ಮಾಡಿದ ಖದೀಮರು
ಕಳ್ಳರು ಮಧ್ಯರಾತ್ರಿ ತೇರು ಬೀದಿ ಮತ್ತು ದೇವಸ್ಥಾನದ ಸುತ್ತಲು ವಿದ್ಯುತ್ ಸಂಪರ್ಕ ಕಡಿತಗೊಳಿಸಿ ದೇಗುಲ ಪ್ರವೇಶಿಸಿದ್ದಾರೆ. ಸಾಕ್ಷಿ ಸಿಗಬಾರದೆಂದು ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಅಪಹರಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೆಂಗಳೂರಿನ ಬ್ಯಾಂಕ್ ಮ್ಯಾನೇಜರ್ ಅಡ್ಡಗಟ್ಟಿ ರಾಬರಿ
ವಿಷಯ ತಿಳಿದು ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್ ಅವರು ದೇಗುಲಕ್ಕೆ ಭೇಟಿ ನೀಡಿದ್ದರು. ಸ್ವಾಮೀಜಿ ಅವರೊಂದಿಗೆ ಚರ್ಚೆ ನಡೆಸಿದರು. ಎಎಸ್ಪಿ ಎ.ಜೆ.ಕಾರ್ಯಪ್ಪ, ಡಿವೈಎಸ್ಪಿ ಶಿವಾನಂದ ಮದರಕಂಡಿ, ಸಿಪಿಐ ರುದ್ರೇಶ್, ಸಬ್ ಇನ್ಸ್ಪೆಪೆಕ್ಟರ್ ಮಂಜುನಾಥ್ ಕುರಿ ಭೇಟಿ ನೀಡಿ ಪರಿಶೀಲಿಸಿದರು. ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





