Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸ್ವಸಹಾಯ ಸಂಘದ ಸಾಲ ತೀರಿಸಲು ಮನೆ ಬೀಗ ಒಡೆದ, ಕೊನೆಗೆ ತೀರಿಸಿದ ಸಾಲವೇ ಸಾಕ್ಷಿಯಾಗಿ ಪೊಲೀಸರಿಗೆ ಸಿಕ್ಕಿಬಿದ್ದ

ಸ್ವಸಹಾಯ ಸಂಘದ ಸಾಲ ತೀರಿಸಲು ಮನೆ ಬೀಗ ಒಡೆದ, ಕೊನೆಗೆ ತೀರಿಸಿದ ಸಾಲವೇ ಸಾಕ್ಷಿಯಾಗಿ ಪೊಲೀಸರಿಗೆ ಸಿಕ್ಕಿಬಿದ್ದ

04/07/2021 10:11 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SORABA NEWS | 4 ಜುಲೈ 2021

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಸ್ವಸಹಾಯ ಸಂಘದಲ್ಲಿ ಮಾಡಿದ ಸಾಲ ತೀರಿಸಲು ಮನೆಯ ಬೀಗ ಒಡೆದು ಕಳವು ಮಾಡಿದ್ದ ಆರೋಪಿಯನ್ನು ಚಿನ್ನಾಭರಣ ಸಮೇತ ಸೊರಬ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತಾಲ್ಲೂಕಿನ ಛತ್ರದಹಳ್ಳಿ ಗ್ರಾಮದ ಚಂದ್ರಪ್ಪ ಗಣೇಶಪ್ಪ (30) ಬಂಧಿತ ಆರೋಪಿ. ಸಾಲ ತೀರಿಸಲು ಕಳವು ಮಾಡಿದ್ದ ಚಂದ್ರಪ್ಪ, ಅದೆ ಸಾಲ ತೀರಿಸಿ ಪೊಲೀಸರ ಅತಿಥಿಯಾಗಿದ್ದಾನೆ.

ಆರಿದ್ರ ಮಳೆಗೆ ಹಬ್ಬಕ್ಕೆ ಹೋದಾಗ ಕಳ್ಳತನ

ಜೂನ್‍  29ರಂದು ಛತ್ರದಹಳ್ಳಿಯ ರಮೇಶ್ ಅವರು ಕುಟುಂಬ ಸಮೇತ ಆರಿದ್ರಾ ಮಳೆ ಹಬ್ಬಕ್ಕೆಂದು ನೆರೆಯ ಗ್ರಾಮಕ್ಕೆ ತೆರಳಿದ್ದರು. ಈ ಬಗ್ಗೆ ಮಾಹಿತಿ ಹೊಂದಿದ್ದ ಆರೋಪಿ ಚಂದ್ರಪ್ಪ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಖಚಿತ ಪಡಿಸಿಕೊಂಡು, ಮನೆಯ ಬೀಗ ಒಡದು ಕಳವು ಮಾಡಿದ್ದ .

203044815 1148179448995297 4099900154580379732 n.jpg? nc cat=100&ccb=1 3& nc sid=730e14& nc ohc=EB7AAr6Q0TkAX9CDOlV&tn=XgSJ3kUX1No5RJvs& nc ht=scontent.fblr1 6

ತೀರಿಸಿದ ಸಾಲವೇ ಪ್ರಮುಖ ಸಾಕ್ಷಿಯಾಯ್ತು..!

ಮನೆ ಕಳ್ಳತನ ಮಾಡಿದ್ದ ಚಂದ್ರಪ್ಪ ಯಾರಿಗೂ ಗೊತ್ತಾಗದೆ ಹಾಗೆ ಸಹಜವಾಗಿದ್ದ. ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆ ಚಂದ್ರಪ್ಪ, ಸ್ವಸಹಾಯ ಸಂಘದ 60 ಸಾವಿರ ಸಾಲವನ್ನು ಒಮ್ಮೆಗೆ ತೀರಿಸಿದ್ದು ಗೊತ್ತಾಗಿತ್ತು. ವಿಚಾರಣೆ ನಡೆಸಿದಾಗ ಕಳ್ಳತನ ವಿಚಾರ ಬಾಯಿಬಿಟ್ಟಿದ್ದಾನೆ.

ಪೊಲೀಸರಿಂದ ಚಿನ್ನಾಭರಣ ವಶಕ್ಕೆ

ಆರೋಪಿ ಚಂದ್ರಪ್ಪನಿಂದ 10 ಗ್ರಾಂ ತೂಕದ ಚೈನ್, 8 ಗ್ರಾಂ ತೂಕದ ಎರಡು ಕೆನ್ನೆ ಸರಪಳಿ, 6 ಗ್ರಾಂ ತೂಕದ ಉಂಗುರು ಹಾಗೂ 2 ಗ್ರಾಂ ತೂಕದ ಒಂದು ಬಟನ್ ಅಂದಾಜು 92 ಸಾವಿರ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.

ಡಿವೈಎಸ್ಪಿ ಶಿವಾನಂದ ಮದರಕಂಡಿ, ಇನ್ಸ್‍ಪೆಕ್ಟರ್‍ ಆರ್.ಡಿ. ಮರುಳಸಿದ್ದಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಟಿ.ಬಿ. ಪ್ರಶಾಂತ್ ಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಚಿನ್ನಾಭರಣ ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿಯಲ್ಲಿ ಎಎಸ್ಐಗಳಾದ ಶಬ್ಬೀರ್ ಖಾನ್, ಚಿನ್ನಪ್ಪ, ಸಿಬ್ಬಂದಿ ಪರಮೇಶ ನಾಯ್ಕ್, ಸಲ್ಮಾನ್ಖಾನ್ ಹಾಜಿ, ಸಿದ್ದನ ಗೌಡ ಬಣಕಾರ, ಶಶಿಧರ, ಸಂದೀಪ, ಎಂ.ಜಿ. ಮೋಹನ, ಸುಧಾಕರ, ಜಗದೀಶ ಬೇಲೂರಪ್ಪನವರ್ ಪಾಲ್ಗೊಂಡಿದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 040721 Anjanapura Dam Full 1 ನಿಗದಿಗಿಂತಲೂ ಮೊದಲೆ ಅಂಜನಾಪುರ ಜಲಾಶಯ ಭರ್ತಿ, ಪ್ರವಾಸಿಗರ ಸಂಖ್ಯೆ ಹೆಚ್ಚಳ
Next Article 040721 Truck Accident At Shikaripura Shivaji Kanive 1 ಹಿಮ್ಮುಖವಾಗಿ ನುಗ್ಗಿದ ಲಾರಿ, ಮನೆ ಧ್ವಂಸ, ಒಳಗಿದ್ದವರು ಜಸ್ಟ್ ಮಿಸ್ | VIDEO REPORT

ಇದನ್ನೂ ಓದಿ

Minister-Madhu-Bangarappa-at-Kandayotsava
SORABA

ಸೊರಬದಲ್ಲಿ ಹಕ್ಕುಪತ್ರ, ಕಂದಾಯ ಇಲಾಖೆ ನೌಕರರಿಗೆ ಬಹುಮಾನ ವಿತರಣೆ, ಕ್ಯಾಲೆಂಡರ್‌ ಬಿಡುಗಡೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
20/05/2025
Police-Jeep-With-Light-New.
CRIME DIARYSHIVAMOGGA CITY

ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್‌, CCTV ಚೆಕ್‌ ಮಾಡಿದ ಬ್ಯಾಂಕ್‌ ಸಿಬ್ಬಂದಿ ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
crime name image
CRIME DIARYSHIVAMOGGA CITY

ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್‌, ವಾಪಸ್‌ ಬಂದಾಗ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
Plate bank at Soraba
SORABA

ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
Electric-Locomotive-train-for-Shimoga
CRIME DIARYSHIVAMOGGA CITY

ಮೈಸೂರು ಇಂಟರ್‌ಸಿಟಿ ರೈಲಿಗೆ ಸಿಲುಕಿ ಶಿವಮೊಗ್ಗದಲ್ಲಿ ಎತ್ತು, ವ್ಯಕ್ತಿ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/05/2025
Madhu-Bangarappa-Minister
SHIVAMOGGA CITYSORABA

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಿನಿಸ್ಟರ್‌ ಮಧು ಬಂಗಾರಪ್ಪ ಭೇಟಿ, ಹಲವು ಕಾರ್ಯಕ್ರಮದಲ್ಲಿ ಭಾಗಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?