ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021
ಗೋಪಾಲಗೌಡ ಬಡಾವಣೆಯಲ್ಲಿ ಕಳ್ಳರ ಹಾವಳಿ ಮುಂದುವರೆದಿದೆ. ಮನೆಯೊಂದರ ಬೀಗ ಒಡೆದು ಚಿನ್ನಾಭರಣ, ಸೀರೆಗಳು, ದುಬಾರಿ ವಾಚ್’ಗಳನ್ನು ಕಳ್ಳತನ ಮಾಡಿ ಕಳ್ಳರು ಎಸ್ಕೇಪ್ ಆಗಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಇದನ್ನೂ ಓದಿ | ಗಮನ ಬೇರೆಡೆ ಸೆಳೆದು ಚಿನ್ನದ ಸರ ಕಳವು, ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ ವೈರಲ್
ಗೋಪಾಲಗೌಡ ಬಡಾವಣೆಯ ಇ ಬ್ಲಾಕ್’ನಲ್ಲಿರುವ ಮಂಜಪ್ಪಗೌಡ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೇಗಾಯ್ತು ಕಳ್ಳತನ?
ಗೋಪಾಲಗೌಡ ಬಡಾವಣೆಯಲ್ಲಿರುವ ಮನೆಗೆ ಬೀಗ ಹಾಕಿ, ಮಂಜಪ್ಪಗೌಡ ಅವರು ಹೊಸನಗರದಲ್ಲಿರುವ ತಮ್ಮ ತೋಟಕ್ಕೆ ಹೋಗಿದ್ದರು. ಅವರು ಮನೆಗೆ ಹಿಂತಿರುಗಿದಾಗ ಬಾಗಿಲ ಬೀಗ ಒಡೆದಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ | ಕಳ್ಳರು, ದರೋಡೆಕೋರರಿಂದ ರಕ್ಷಿಸಿಕೊಳ್ಳಲು ಗಸ್ತು ಆರಂಭಿಸಿದ ಜನ, ಫೋಟೊ ರಿಲೀಸ್
ಕಳ್ಳರು ಮನೆಯ ಎರಡು ಬೆಡ್ ರೂಂಗಳಲ್ಲಿ ಹುಡುಕಾಡಿದ್ದಾರೆ. ಬಂಗಾರದ 30 ಗ್ರಾಂನ ಎರಡು ಚೈನ್ ಮತ್ತು ಪೆಂಡೆಂಟ್, 8 ಗ್ರಾಂನ ಮಕ್ಕಳ ಚೈನ್, 5 ಗ್ರಾಂನ ಮಾಣಿಕ್ಯ ಹರಳಿನ ರಿಂಗ್, 3 ಗ್ರಾಂನ ಮಕ್ಕಳ ಕಿವಿಯೋಲೆ, 15 ಗ್ರಾಂನ ಮೂರು ಜೊತೆ ಕಿವಿಯೋಲೆಗಳನ್ನು ಕಳ್ಳತನ ಮಾಡಿದ್ದಾರೆ. 25 ಸಾವಿರ ರೂ. ಮೌಲ್ಯದ ರೇಷ್ಮೆ ಸೀರೆಗಳು, 30 ಸಾವಿರ ರೂ. ಮೌಲ್ಯದ ಎರಡು ವಾಚುಗಳನ್ನು ಕೂಡ ಕಳ್ಳರು ಕದ್ದೊಯ್ದಿದ್ದಾರೆ.
ಗೋಪಾಲಗೌಡ ಬಡಾವಣೆಯಲ್ಲಿ ಕಳ್ಳತನ, ರಸ್ತೆಗಿಳಿದವರನ್ನು ಅಡ್ಡಗಟ್ಟಿ ದರೋಡೆ ಮಾಡುವ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆ ನಿವಾಸಿಗಳು ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದ್ದರು. ಅಲ್ಲದೆ ರಾತ್ರಿ ವೇಳೆ ಸ್ಥಳೀಯರೆ ಕೆಲಹೊತ್ತು ಗಸ್ತು ಆರಂಭಿಸಿದ್ದರು. ಈ ನಡುವೆಯು ಕಳ್ಳತನವಾಗಿರುವುದು ಸ್ಥಳೀಯರ ಆತಂಕ ಹೆಚ್ಚಿಸಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200