ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
BHADRAVATHI NEWS, 4 OCTOBER 2024 : ರಾತ್ರಿ ವೇಳೆ ಕಾರ್ಖಾನೆ ಸ್ಥಳಕ್ಕೆ ಭೇಟಿ ನೀಡಿದ್ದ ಮಾಲೀಕನಿಗೆ (owner) ಮಚ್ಚು ತೋರಿಸಿ, ಮೊಬೈಲ್ ಕಸಿದುಕೊಂಡು ಬೆದರಿಕೆ ಒಡ್ಡಲಾಗಿದೆ. ಅಲ್ಲದೆ ಕಾರ್ಖಾನೆಯಿಂದ ಹಲವು ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಮಾಚೇನಹಳ್ಳಿಯ ಇಂಡಸ್ಟ್ರಿಯಲ್ ಏರಿಯಾದ ಸ್ವಯಂ ಅಲಾಯ್ ಕಾಸ್ಟಿಂಗ್ ಕಾರ್ಖಾನೆಯಲ್ಲಿ ಘಟನೆ ಸಂಭವಿಸಿದೆ. ಕಾರ್ಖಾನೆ ಮಾಲೀಕ ರವಿಶಂಕರ್ ಅವರು ಊಟ ಮುಗಿಸಿ ರಾತ್ರಿ ಕಾರ್ಖಾನೆ ಸ್ಥಳಕ್ಕೆ ಬಂದಿದ್ದರು. ಟಾರ್ಚ್ ಹಾಕಿ ಪರಿಶೀಲಿಸುತ್ತಿದ್ದಾಗ ಎಂಟು ಮಂದಿ ಬೇಲಿ ಹಾರಿ ಬಂದಿದ್ದರು. ರವಿಶಂಕರ್ ಅವರಿಗೆ ಮಚ್ಚು ತೋರಿಸಿ, ಮಾತನಾಡದಂತೆ ಎಚ್ಚರಿಕೆ ನೀಡಿದ್ದಾರೆ. ರವಿಶಂಕರ್ ಅವರ ಬಳಿ ಇದ್ದ ಮೊಬೈಲ್ ಮತ್ತು ಟಾರ್ಚ್ ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಾಲೀಕ ರವಿಶಂಕರ್ ಅವರನ್ನು ಸೆಕ್ಯೂರಿಟಿ ಕ್ಯಾಬಿನ್ನಲ್ಲಿ ಕೂರಿಸಿದ್ದರು. ಐದಾರು ಮಂದಿ ಕಾರ್ಖಾನೆ ಆವರಣದಲ್ಲಿ ಮದ್ಯ ಸೇವಿಸಿದ್ದಾರೆ. ವಾಹನ ತರಿಸಿಕೊಂಡು ಜನರೇಟರ್ ಬ್ಯಾಟರಿ, ಅಲುಮೀನಿಯಂ ಡೈ, 220 ಕೆ.ಜಿ ತೂಕದ ತಾಮ್ರದ ತಂತಿ ಕಳವು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ದಸರಾಗೆ ವೈಭವದ ಚಾಲನೆ, ಹೇಗಿತ್ತು ಉದ್ಘಾಟನೆ?
LATEST NEWS
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

About The Editor
ನಿತಿನ್ ಆರ್.ಕೈದೊಟ್ಲು
















