BHADRAVATHI NEWS, 4 OCTOBER 2024 : ರಾತ್ರಿ ವೇಳೆ ಕಾರ್ಖಾನೆ ಸ್ಥಳಕ್ಕೆ ಭೇಟಿ ನೀಡಿದ್ದ ಮಾಲೀಕನಿಗೆ (owner) ಮಚ್ಚು ತೋರಿಸಿ, ಮೊಬೈಲ್ ಕಸಿದುಕೊಂಡು ಬೆದರಿಕೆ ಒಡ್ಡಲಾಗಿದೆ. ಅಲ್ಲದೆ ಕಾರ್ಖಾನೆಯಿಂದ ಹಲವು ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಮಾಚೇನಹಳ್ಳಿಯ ಇಂಡಸ್ಟ್ರಿಯಲ್ ಏರಿಯಾದ ಸ್ವಯಂ ಅಲಾಯ್ ಕಾಸ್ಟಿಂಗ್ ಕಾರ್ಖಾನೆಯಲ್ಲಿ ಘಟನೆ ಸಂಭವಿಸಿದೆ. ಕಾರ್ಖಾನೆ ಮಾಲೀಕ ರವಿಶಂಕರ್ ಅವರು ಊಟ ಮುಗಿಸಿ ರಾತ್ರಿ ಕಾರ್ಖಾನೆ ಸ್ಥಳಕ್ಕೆ ಬಂದಿದ್ದರು. ಟಾರ್ಚ್ ಹಾಕಿ ಪರಿಶೀಲಿಸುತ್ತಿದ್ದಾಗ ಎಂಟು ಮಂದಿ ಬೇಲಿ ಹಾರಿ ಬಂದಿದ್ದರು. ರವಿಶಂಕರ್ ಅವರಿಗೆ ಮಚ್ಚು ತೋರಿಸಿ, ಮಾತನಾಡದಂತೆ ಎಚ್ಚರಿಕೆ ನೀಡಿದ್ದಾರೆ. ರವಿಶಂಕರ್ ಅವರ ಬಳಿ ಇದ್ದ ಮೊಬೈಲ್ ಮತ್ತು ಟಾರ್ಚ್ ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಮಾಲೀಕ ರವಿಶಂಕರ್ ಅವರನ್ನು ಸೆಕ್ಯೂರಿಟಿ ಕ್ಯಾಬಿನ್ನಲ್ಲಿ ಕೂರಿಸಿದ್ದರು. ಐದಾರು ಮಂದಿ ಕಾರ್ಖಾನೆ ಆವರಣದಲ್ಲಿ ಮದ್ಯ ಸೇವಿಸಿದ್ದಾರೆ. ವಾಹನ ತರಿಸಿಕೊಂಡು ಜನರೇಟರ್ ಬ್ಯಾಟರಿ, ಅಲುಮೀನಿಯಂ ಡೈ, 220 ಕೆ.ಜಿ ತೂಕದ ತಾಮ್ರದ ತಂತಿ ಕಳವು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ದಸರಾಗೆ ವೈಭವದ ಚಾಲನೆ, ಹೇಗಿತ್ತು ಉದ್ಘಾಟನೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200