SHIVAMOGGA LIVE NEWS | 8 APRIL 2023
SHIMOGA : ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗಿನಲ್ಲಿದ್ದ (Vanity Bag) ಚಿನ್ನದ ಸರ ಮತ್ತು ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದಲ್ಲಿ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ತೆಗೆದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಏನಿದು ಪ್ರಕರಣ?
ಉಡುಪಿಯಲ್ಲಿ ಮನೆ ದೇವರ ಪೂಜೆ ಮುಗಿಸಿ ಪದ್ಮಾವತಿ ರಾವ್ ಎಂಬುವವರು ಖಾಸಗಿ ಬಸ್ಸಿನಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು. ಇಲ್ಲಿಂದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ತಮ್ಮೂರು ಹಾವೇರಿ ಜಿಲ್ಲೆ ಹಿರೇಕೆರೂರಿನ ಹಂಸಬಾವಿಗೆ ಹೊರಟಿದ್ದರು. ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ತಮ್ಮ ವ್ಯಾನಿಟಿ ಬ್ಯಾಗ್ (Vanity Bag) ತೆಗೆದಾಗ ಕಳ್ಳತನವಾಗಿದೆ ಎಂಬುದು ಅವರ ಅರಿವಿಗೆ ಬಂದಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್ಪೋಸ್ಟ್ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್
ವ್ಯಾನಿಟಿ ಬ್ಯಾಗಿನಲ್ಲಿ 15 ಸಾವಿರ ರೂ. ನಗದು, 33 ಗ್ರಾಂ ತೂಕದ ಬಂಗಾರದ ಅವಲಕ್ಕಿ ಸರ ಕಳ್ಳತನವಾಗಿತ್ತು. ಸರದ ಅಂದಾಜು ಮೌಲ್ಯ 1.32 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಎಲ್ಲೆಡೆ ಹುಡುಕಾಡಿದ ಪದ್ಮಾವತಿ ರಾವ್ ಅವರು ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200