ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ : ಮನೆಯಲ್ಲಿ ಕಳವು ಮಾಡುತ್ತಿದ್ದ ಆರೋಪಿಯನ್ನು (Thief) ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಟ್ಟಿನಹೊಳೆ ಗ್ರಾಮದ ಕೆ.ಆರ್. ಶರತ್ (26) ಬಂಧಿತ.
ಈತನಿಂದ 1 ಲಕ್ಷ ರೂ. ಮೌಲ್ಯದ 12 ಗ್ರಾಂನ ಬಂಗಾರದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ. ತಾಲ್ಲೂಕಿನ ಮತ್ತಿಕೈ ಗ್ರಾಮದ ದೊಡ್ಡಮನೆ ವಾಸಿ ಪರಮೇಶ್ವರಯ್ಯ ಈಚೆಗೆ ಸಂಬಂಧಿಕರ ಮನೆಗೆ ತೆರಳಿದ್ದರು. ಆಗ ಮನೆಯ ಬೀಗ ಮುರಿದು 12 ಗ್ರಾಂನ ಚಿನ್ನದ ಸರ ಹಾಗೂ 15 ಸಾವಿರ ರೂ. ನಗದು ಕಳ್ಳತನವಾಗಿತ್ತು.

ಈ ಸಂಬಂಧ ಪರಮೇಶ್ವರಯ್ಯ ಠಾಣೆಗೆ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು ಶರತ್ನನ್ನು ಬಂಧಿಸಿದ್ದಾರೆ. ಸಿಪಿಐ ಗುರಣ್ಣ ಎಸ್. ಹೆಬ್ಬಾಳ್ ಮಾರ್ಗದರ್ಶನದಲ್ಲಿ ಪಿಎಸ್ಐ ಶಿವಾನಂದ ಕೋಳಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು. ಸಿಬ್ಬಂದಿ ಕುಮಾರ್.ಟಿ, ಶೇಕ್ ಅಮೀರ್ ಜಾನ್, ಕಿರಣ್, ವಿಶ್ವನಾಥ್, ಪ್ರವೀಣ್ ಕುಮಾರ್, ವಿಶ್ವನಾಥ್, ರವಿಚಂದ್ರ, ಸುಜಯ್ ಕುಮಾರ್, ಪ್ರಜ್ವಲ್.ಡಿ.ಎಸ್ ಮತ್ತು ಸಚಿನ್ ಕಾರ್ಯಾಚರಣೆಯಲ್ಲಿದ್ದರು.

ಇದನ್ನೂ ಓದಿ » ಕಾರಿನಲ್ಲಿ ಬಂದು ಡಿವೈಡರ್ ಮೇಲಿದ್ದ ಟ್ರಾಫಿಕ್ ಪೊಲೀಸ್ ರಿಫ್ಲೆಕ್ಟರ್ ಕಟೌಟ್ ಕದ್ದೊಯ್ದ ದುಷ್ಕರ್ಮಿಗಳು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





