ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕುಟುಂಬ ಸಮೇತ ತಮಿಳುನಾಡಿನ ದೇವಸ್ಥಾನಕ್ಕೆ ಹೋಗಿದ್ದ ಸಂದರ್ಭ ಮನೆಯ ಬೀಗ ಮುರಿದು ನಗದು ಮತ್ತು ಚಿನ್ನಾಭರಣ (gold) ದೋಚಲಾಗಿದೆ. ಶಿವಮೊಗ್ಗದ ನಗರದ ಇಂದಿರಾ ಗಾಂಧಿ ಬಡಾವಣೆಯಲ್ಲಿ ನಡೆದಿದೆ.
ಹೆಚ್.ಕೆ. ರಂಗನಾಥ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ರಂಗನಾಥ್ ಅವರು ಕುಟುಂಬದೊಂದಿಗೆ ತಮಿಳುನಾಡಿನ ಓಂ ಶಕ್ತಿ ದೇವಸ್ಥಾನಕ್ಕೆ ಹೋಗಿದ್ದರು. ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದೆ. ಒಳಗೆ ಪರಿಶೀಲಿಸಿದಾಗ ಬೀರುವಿನ ಲಾಕ್ ಮುರಿದು ಅದರಲ್ಲಿದ್ದ ಸುಮಾರು ₹21,000 ಮೌಲ್ಯದ ಬಂಗಾರದ ಒಡವೆಗಳು ಮತ್ತು ₹50,000 ನಗದು ಕಳ್ಳತನ ಮಾಡಿರುವುದು ಪತ್ತೆಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೊಡ್ಡಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಕಾರು ಡಿಕ್ಕಿಯಾಗಿ ಮತ್ತೊಂದು ಕಾರಿನ ಚಾಲಕ ಸಾವು, ಹೇಗಾಯ್ತು ಘಟನೆ?
LATEST NEWS
- ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

- ವಿದ್ಯುತ್ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?

- ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್ ಗರಂ, ಖಡಕ್ ಸೂಚನೆ, ಏನದು?

- BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್ ಸಾವು

- ಡಿ.ಬಿ.ಹಳ್ಳಿ ಕ್ರಾಸ್ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















