SHIVAMOGGA LIVE NEWS | 16 MAY 2023
SAGARA : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಕುಟುಂಬಕ್ಕೆ ಸೇರಿದ ಸಂಸ್ಥೆಯೊಂದರ ಕಟ್ಟಡದ ಹಿಂಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಕೃತ್ಯ ಎಸಗಿದವರು ಸುಳಿವು ಸಿಗಬಾರದು ಎಂದು ಸಿಸಿಟಿವಿ (CCTV) ಕ್ಯಾಮರಾ ಮತ್ತು ಡಿವಿಆರ್ಗಳನ್ನೂ ಕದ್ದೊಯ್ದಿದ್ದಾರೆ.
ಸಾಗರದ ಮಾರುಕಟ್ಟೆ ರಸ್ತೆಯ ಸೊರಬ ಸರ್ಕಲ್ನಲ್ಲಿರುವ ಯುನೈಟೆಡ್ ಟ್ರೇಡಿಂಗ್ ಕಂಪನಿ ಕಟ್ಟಡದ ಹಿಂಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. 17 ಲಕ್ಷ ರೂ. ಮೌಲ್ಯದ ಸಿಗರೇಟ್ ಪೆಟ್ಟಿಗೆಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಕಳ್ಳರು ಸಿಸಿಟಿವಿ (CCTV) ಕ್ಯಾಮರಾ ಮತ್ತು ಡಿವಿಆರ್ ಕೂಡ ಹೊತ್ತೊಯ್ದಿದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ವಿಚಾರ ತಿಳಿಯುತ್ತಿದ್ದಂತೆ ಸಾಗರ ನಗರ ಠಾಣೆಯ ಇನ್ಸ್ಪೆಕ್ಟರ್ ಸೀತಾರಾಮ್ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಶಿವಮೊಗ್ಗದಿಂದ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ತಪಾಸಣೆ ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗದ ಪುರಾಣ ಪ್ರಸಿದ್ಧ ದೇವಸ್ಥಾನದಲ್ಲಿ ಹುಂಡಿ ಒಡೆದ ಕಳ್ಳರು, ರಥೋತ್ಸವ ನಡೆದ ರಾತ್ರಿಯೇ ಖದೀಮರ ಎಂಟ್ರಿ
ಸಂಸ್ಥೆಯ ಮುಖ್ಯಸ್ಥೆ ಅನುರಾಧಾ ಕಾಗೋಡು ಅವರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200