SHIVAMOGGA LIVE NEWS | THREAT | 06 ಮೇ 2022
ಕೊಲೆ ಬೆದರಿಕೆ ಆರೋಪ ಸಂಬಂಧ ಕಂಬಿ ಎಣಿಸಿ ಬಂದ ಆರೋಪಿಗಳು ಮತ್ತೆ ಪ್ರಾಣ ಬೆದರಿಕೆ ಒಡ್ಡಿದ್ದಾರೆ. ಇವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
ಉಸ್ಮಾನ್ ಮತ್ತು ಅಬ್ಬಾಸ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಭರತ್ ಮತ್ತು ಸುಮಂತ ಎಂಬುವವರನ್ನು ಸಾಯಿಸುತ್ತೇವೆ ಎಂದು ಆರೋಪಿಗಳು ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.
ಏನಿದು ಪ್ರಕರಣ?
ಏಪ್ರಿಲ್ 23ರಂದು ಭರತ್ ಎಂಬಾತನಿಗೆ ಉಸ್ಮಾನ್, ಅಬ್ಬಾಸ್ ಮತ್ತು ಸಲ್ಮಾನ್ ಎಂಬುವವರು ಜೀವ ಬೆದರಿಕೆ ಒಡ್ಡಿದ್ದರು. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ಜೈಲಿಗೆ ಕಳುಹಿಸಲಾಗಿತ್ತು.
ಜೈಲಿನಿಂದ ಬಿಡುಗಡೆಯಾಗಿ ಬಂದ ಉಸ್ಮಾನ್ ಮತ್ತು ಅಬ್ಬಾಸ್ ಮತ್ತೆ ಜೀವ ಬೆದರಿಕೆ ಒಡ್ಡಿದ್ದಾರೆ. ಭರತನ ಸಂಬಂಧಿಯೊಬ್ಬರ ಮನೆ ಬಳಿಗೆ ಬಂದು ಕೊಲೆ ಬೆದರಿಕೆ ಒಡ್ಡಿದ್ದಾರೆ. ‘ಭರತ ಮತ್ತು ಸುಮಂತ ಎಲ್ಲಿದ್ದಾರೆ. ನಮ್ಮ ವಿರುದ್ಧ ಎಷ್ಟು ಕಂಪ್ಲೇಂಟ್ ಕೊಟ್ಟರೂ ಅವರನ್ನು ಬಿಡುವುದಿಲ್ಲ. ಅವರನ್ನು ಸಾಯಿಸುತ್ತೇವೆ’ ಎಂದು ಇಬ್ಬರು ಆರೋಪಿಗಳು ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಗಾಂಜಾ ಅಮಲಿನಲ್ಲಿದ್ದರ ವಿಚಾರಣೆ ವೇಳೆ ದೊಡ್ಡ ಸಂಚು ಬಯಲು, ಏನದು ಪ್ಲಾನ್?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200